Advertisement

ಯೋಗಿ ಗ್ರೀನ್ ಸಿಗ್ನಲ್;ಅಯೋಧ್ಯೆಯಲ್ಲಿ ತಲೆಎತ್ತಲಿದೆ ರಾಮಾಯಣ ಮ್ಯೂಸಿಯಂ

03:12 PM Mar 21, 2017 | Team Udayavani |

ನವದೆಹಲಿ/ಲಕ್ನೋ:ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರದ ಆಡಳಿತಾವಧಿಯಲ್ಲಿ ತಡೆಬಿದ್ದಿದ್ದ ಅಯೋಧ್ಯೆಯಲ್ಲಿ ನಿರ್ಮಾಣವಾಗಬೇಕಿದ್ದ ಕೇಂದ್ರ ಸರ್ಕಾರದ ಪ್ರಸ್ತಾವಿತ ರಾಮಾಯಣ ಮ್ಯೂಸಿಯಂಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗ್ರೀನ್ ಸಿಗ್ನಲ್ ನೀಡಿದ್ದಾರೆ.

Advertisement

ಅಯೋಧ್ಯೆಯಲ್ಲಿ ರಾಮಾಯಣ ಮ್ಯೂಸಿಯಂ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ 150 ಕೋಟಿ ರೂಪಾಯಿ ಮೀಸಲಿಟ್ಟಿತ್ತು. ಆದರೆ ಹಿಂದಿನ ಅಖಿಲೇಶ್ ನೇತೃತ್ವದ ಸಮಾಜವಾದಿ ಸರ್ಕಾರ ಜಾಗ ನೀಡಿಲ್ಲವಾಗಿತ್ತು.

ಇದೀಗ ಅಯೋಧ್ಯೆಯಲ್ಲಿ ರಾಮಾಯಣ ಮ್ಯೂಸಿಯಂ ನಿರ್ಮಾಣಕ್ಕಾಗಿ ನೂತನ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ 20 ಎಕರೆ ಸ್ಥಳವನ್ನು ಮೀಸಲಿರಲು ನಿರ್ಧರಿಸಿದೆ. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಸ್ತಾವಿತ ರಾಮಾಯಣ ಮ್ಯೂಸಿಯಂ ಅಯೋಧ್ಯೆಯಲ್ಲಿ ತಲೆ ಎತ್ತಲಿದೆ.

Advertisement

Udayavani is now on Telegram. Click here to join our channel and stay updated with the latest news.

Next