Advertisement

Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ

07:54 PM Oct 04, 2024 | Team Udayavani |

ಹೊಸದಿಲ್ಲಿ: ನರೇಂದ್ರ ಮೋದಿ ಸರಕಾರದ ಕೌಶಲ್ಯಾಭಿವೃದ್ಧಿ ಸಹಕಾರವು ಪಶ್ಚಿಮ ಏಷ್ಯಾ ಯುದ್ಧದಲ್ಲಿ ಇಸ್ರೇಲ್‌ನಲ್ಲಿ ಸುಮಾರು 15,000 ಭಾರತೀಯ ಕಾರ್ಮಿಕರನ್ನು ನೇಮಿಸಿಕೊಳ್ಳಲು ನೆರವು ಮಾಡಿಕೊಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ(ಅ4) ಆರೋಪಿಸಿದ್ದಾರೆ.

Advertisement

‘ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾಗಿಯಾಗಲು ನಮ್ಮ ದೇಶದ ಯುವಕರು ಸಂಶಯಾಸ್ಪದ ಏಜೆಂಟರಿಂದ ವಂಚನೆಗೊಳಗಾಗಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಖರ್ಗೆ ಹೇಳಿದ್ದಾರೆ.

“ಇದು ಮೋದಿ ಸರಕಾರದ ಯುವ ವಿರೋಧಿ ನೀತಿಗಳಿಂದ ಪ್ರೇರಿತವಾದ ನಿರುದ್ಯೋಗದ ಬಗ್ಗೆ ಹೇಳುತ್ತದೆ” ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

”ಇದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಕಲಿ, ಸ್ವಂತ ವೈಫಲ್ಯಗಳು!. ಹರಿಯಾಣದ ಯುವಕರು ನಾಳೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next