Advertisement

Hubli; ಮೋದಿ ಗ್ಯಾರಂಟಿ ಬದುಕು ಕಟ್ಟುವ ಶಾಶ್ವತ ಗ್ಯಾರಂಟಿ: ಬೊಮ್ಮಾಯಿ

02:42 PM Apr 14, 2024 | Team Udayavani |

ಹುಬ್ಬಳ್ಳಿ: ಮೋದಿ ಗ್ಯಾರಂಟಿ ದೇಶ ಹಾಗೂ ಬದುಕು ಕಟ್ಟುವ ಹಾಗೂ ಶಾಶ್ವತ ಗ್ಯಾರಂಟಿಯಾಗಿವೆ. ಕಾಂಗ್ರೆಸ್ ನವರಂತೆ ಬೇಜವಾಬ್ದಾರಿ ಭರವಸೆ ,ಯೋಜನೆಗಳು ನಮ್ಮವಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನುಡಿದರು.

Advertisement

ಡಾ.ಬಿ.ಆರ್. ಅಂಬೇಡ್ಕರ ಅವರ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಗ್ಯಾರಂಟಿ ಎಂದರೆ ಅದು ಸಾಮಾಜಿಕ ನ್ಯಾಯದ ಗ್ಯಾರಂಟಿಯಾಗಿರುತ್ತದೆ ಎಂದರು.

ಎನ್ ಡಿಎ ಮತ್ತೊಮ್ಮೆ ದೇಶದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸದೊಂದಿಗೆ ಪ್ರಣಾಳಿಕೆ ಸಿದ್ಧಪಡಿಸಿದ್ದೇವೆ. ಜನರ ಅಭಿಪ್ರಾಯಗಳನ್ನು ಪಡೆದು ಜವಾಬ್ದಾರಿಯಿಂದ ನಾವು ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಮತ್ತೊಮ್ಮೆ ಅದನ್ನು ಜನರ ಮುಂದಿಟ್ಟು ಚರ್ಚಿಸಲಾಗುವುದು ಎಂದರು.

ಕೆಲವರು ಬೇಜವಾಬ್ದಾರಿಯಿಂದ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next