Advertisement

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಉರುಳಿಸಲು ಗೂಢಾಚಾರಿಕೆ ಮಾಡಲಾಗಿದೆ : ಕಾಂಗ್ರೆಸ್

08:13 PM Jul 20, 2021 | Team Udayavani |

ನವದೆಹಲಿ  : ಫೋನ್ ಕದ್ದಾಲಿಕೆ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಲಾಗಿದೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ತೀವ್ರ ಆರೋಪ ಮಾಡಿದ್ದಾರೆ.  ಕುಮಾರಸ್ವಾಮಿ ಸಿಎಂ ಆಗಿದ್ದಾಗ  2019ರಲ್ಲಿ ಪೆಗಾಸಸ್ ಮೂಲಕ ಫೋನ್ ಕದ್ದಾಲಿಕೆ ಮಾಡಿ ಸರ್ಕಾರವನ್ನು ಕೆಡವಲಾಗಿದೆ. ಕರ್ನಾಟಕ ರಾಜಕೀಯ ನಾಯಕರ ಫೋನ್ ಕದ್ದಾಲಿಕೆಯಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ,  ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಉರುಳಿಸಲು ಗೂಢಾಚಾರಿಕೆ ಮಾಡಲಾಗಿದೆ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮೋದಿ ಸರ್ಕಾರ ಬುಡಮೇಲು ಮಾಡಿದೆ ಎಂದರು.

ಇದೇ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ಕರ್ನಾಟಕದಲ್ಲಿ ಕುದುರೆ ವ್ಯಾಪಾರದ ಮೂಲಕ ಅಧಿಕಾರಕ್ಕೆ ಬಂದಿದ್ದು, ಅದೇ ರೀತಿ ಮಧ್ಯಪ್ರದೇಶದಲ್ಲಿಯೂ ನಡೆದಿದೆ ಎಂದರು.  ಅಂದು ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವೆಂಕಟೇಶ್, ಡಿಸಿಎಂ ಆಗಿದ್ದ ಜಿ. ಪರಮೇಶ್ವರ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಗನ್ ಮ್ಯಾನ್ ಫೋನ್ ಕೂಡಾ ಕದ್ದಾಲಿಸಲಾಗಿದೆ ಎಂದು ಕೆ.ಸಿ. ವೇಣುಗೋಪಾಲ್ ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next