Advertisement

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

01:24 AM Apr 21, 2024 | Team Udayavani |

ಚಿಕ್ಕಬಳ್ಳಾಪುರ: 2ಜಿ ಹಗರಣ, ಕಲ್ಲಿದ್ದಲು ಹಗರಣ ಹೀಗೆ ಹಲವಾರು ಹಗರಣಗಳ ಮೂಲಕ ದೇಶದ ಸಂಪತ್ತನ್ನು ಲೂಟಿ ಮಾಡಿ, ದೇಶದ ಖಜಾನೆಯನ್ನು ಬರಿದು ಮಾಡಿ ಕಾಂಗ್ರೆಸ್ ಸರ್ಕಾರ ಮೋದಿ ಅವರ ಕೈಗೆ ಚೊಂಬು ನೀಡಿತ್ತು. ಅದನ್ನು ಅಕ್ಷಯಪಾತ್ರೆ ಮಾಡಿದ ಕೀರ್ತಿ ಸನ್ಮಾನ್ಯ ಮೋದಿಯವರದ್ದು” ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ಗೆ ದಿಟ್ಟ ತಿರುಗೇಟು ನೀಡಿದ್ದಾರೆ.

Advertisement

ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿಯಲ್ಲಿ ಶನಿವಾರ ನಡೆದ ಎನ್ ಡಿಎ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಿ ”ಸಂತ ಕೈವಾರ ತಾತಯ್ಯ, ಸರ್ ಎಂ. ವಿಶ್ವೇಶ್ವರಯ್ಯ ಅವರ ಈ ಭೂಮಿಯಲ್ಲಿ ಜನರ ದರ್ಶನ ಮಾಡಿದ್ದು ನನ್ನ ಸೌಭಾಗ್ಯ.ನನ್ನ ರಿಪೋರ್ಟ್ ಕಾರ್ಡ್‌ನೊಂದಿಗೆ ನಿಮ್ಮ ಆಶೀರ್ವಾದ ಕೇಳಲು ನಾನು ಇಲ್ಲಿಗೆ ಬಂದಿದ್ದೇನೆ. 24/7 ನಿಮಗಾಗಿ, ನನ್ನ ದೇಶಕ್ಕಾಗಿ ಕೆಲಸ ಮಾಡುವುದನ್ನು ಮುಂದುವರೆಸಲು ನನ್ನನ್ನು ಆಶೀರ್ವದಿಸಿ ಎಂದು ಮನವಿ ಮಾಡಿದರು.

ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ್ ಮತ್ತು ಕೋಲಾರದಲ್ಲಿ ಮಲ್ಲೇಶ್ ಬಾಬು ಅವರನ್ನು ಗೆಲ್ಲಿಸಿ ಎನ್ ಡಿಎ ಗೆ ಬಲ ತುಂಬಲು ಮನವಿ ಮಾಡಿದರು.

ದೇವೇಗೌಡರ ಬದ್ಧತೆ ಕೊಂಡಾಡಿದ ಮೋದಿ
ಪ್ರಚಾರ ಭಾಷಣದ ವೇಳೆ ಪ್ರಧಾನಿ ಮೋದಿ ಅವರು ಜೆಡಿಎಸ್‌ ವರಿಷ್ಠರಾದ ದೇವೇಗೌಡರು ರಾಜ್ಯದ ಅಭಿವೃದ್ಧಿ ಬಗ್ಗೆ ಹೊಂದಿರುವ ಬದ್ಧತೆ ಹಾಗೂ ಕಳಕಳಿಯನ್ನು ಇದೇ ವೇಳೆ ಕೊಂಡಾಡಿದರು. ದೇವೇಗೌಡರ ಆಶೀರ್ವಾದ ನನಗೆ ಸಿಕ್ಕಿದೆ. ಅವರ ಮಾರ್ಗದರ್ಶನವೂ ಸಿಕ್ಕಿದೆ. ಅವರಿಂದ ನಾನು ಸಾಕಷ್ಟು ಪ್ರೇರಣೆ ಪಡೆದಿದ್ದೇನೆ. ವಯಸ್ಸು 90 ಆದರೂ ಅವರಿಗೆ ಇರುವ ಅಭಿವೃದ್ಧಿ ಪರ ಬದ್ಧತೆ ಎಲ್ಲರೂ ಮೆಚ್ಚಬೇಕೆಂದು ಪ್ರಧಾನಿ ಮೋದಿ ಹೇಳಿದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next