Advertisement

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

12:42 AM Jun 17, 2024 | Team Udayavani |

ಹೊಸದಿಲ್ಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜೂ.18 ರಂದು ಪ್ರಧಾನಿ ಮೋದಿ ತಮ್ಮ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದು, ಪಿಎಂ-ಕಿಸಾನ್‌ ಅಡಿಯಲ್ಲಿ 18ನೇ ಕಂತಿನ 9.3 ಕೋಟಿ ರೈತರಿಗೆ ತಲಾ 2 ಸಾವಿರ ರೂ. ವರ್ಗಾವಣೆ, 30 ಸಾವಿರ ಸ್ವಸಹಾಯ ಗುಂಪುಗಳನ್ನು “ಕೃಷಿಸಖಿಗಳು’ ಎಂದು ಗುರುತಿಸುವುದು, ಸೇರಿದಂತೆ ಹಲವು ರೈತ ಕಲ್ಯಾಣ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

Advertisement

ಅಂದು 732 ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ವರ್ಚುವಲ್‌ ಮೂಲಕ ಸಾವಿರಾರು ಪಾಲುದಾರರೊಂದಿಗೆ ಮೋದಿ ಸಂವಾದ ನಡೆಸಲಿದ್ದಾರೆ. ಹಲವು ರಾಜ್ಯಗಳ 50 ಆಯ್ದ ಕೃಷಿ ವಿಜ್ಞಾನ ಕೇಂದ್ರಗಳಿಂದ ಕೆಲವು ಕೇಂದ್ರ ಸಚಿವರು ಸಂವಾದದಲ್ಲಿ ಭಾಗಿಯಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next