Advertisement

ಮೋದಿ ಶಿವಲಿಂಗದ ಮೇಲೆ ಕುಳಿತ ಚೇಳು, ಚಪ್ಪಲಿಯಲ್ಲಿ ತೆಗೆಯಲಾಗುವುದಿಲ್ಲ!

04:31 PM Oct 28, 2018 | Team Udayavani |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶಿವಲಿಂಗದ ಮೇಲೆ ಕುಳಿತಿರುವ ಚೇಳು ಎಂದು  ಆರ್‌ಎಸ್‌ಎಸ್‌ ನಾಯಕರೊಬ್ಬರ ಹಳೆಯ ಹೇಳಿಕೆಯನ್ನು ನೆನಪಿಸಿ   ಕೇಂದ್ರದ ಮಾಜಿ ಸಚಿವ , ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಟೀಕೆ ಮಾಡಿದ್ದಾರೆ. 

Advertisement

ಬೆಂಗಳೂರು ಸಾಹಿತ್ಯೋತ್ಸವದಲ್ಲಿ  ವಿವಿಧ ಗೋಷ್ಠಿಗಳು ಮತ್ತು ಚರ್ಚೆಗಳಲ್ಲಿ  ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು 2012 ರಲ್ಲಿ ಹೆಸರು ಹೇಳದ ಆರ್‌ಎಸ್‌ಎಸ್‌ ನಾಯಕರೊಬ್ಬರ  ಹಳೆಯ ಹೇಳಿಕೆಯನ್ನು ಉಲ್ಲೇಖೀಸಿ   ಈ ಹೇಳಿಕೆ ನೀಡಿದ್ದಾರೆ. 

ಸಭೆಯನ್ನುದ್ದೇಶಿಸಿ ಮಾತನಾಡಿದ ತರೂರ್‌  ಆರ್‌ಎಸ್‌ಎಸ್‌ ನಾಯಕರೊಬ್ಬರು ಮೋದಿಯನ್ನು ಶಿವಲಿಂಗದ ಮೇಲೆ ಕುಳಿತ ಚೇಳಿಗೆ ಹೋಲಿಸಿದ್ದರು. ಅದನ್ನು ಕೈಯಲ್ಲಿ ತೆಗೆಯಲು ಸಾಧ್ಯವಿಲ್ಲ, ಚಪ್ಪಲಿಯಿಂದಲೂ ತೆಗೆಯಲೂ ಸಾಧ್ಯವಿಲ್ಲ ಎಂದು ಹೋಲಿಕೆ ಮಾಡಿದ್ದರು ಎಂದು ಲೇವಡಿ ಮಾಡಿದ್ದಾರೆ. 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next