Advertisement

‘ನರೇಂದ್ರ ಮೋದಿಯವರು ಭಾರತದ ಪ್ರಧಾನಿ’ : ಪಾಕ್‌ ವಿರುದ್ಧ ಕೇಜ್ರಿವಾಲ್‌ ಕಿಡಿ

09:42 AM Feb 01, 2020 | Team Udayavani |

ನವದೆಹಲಿ: ದೆಹಲಿ ಚುನಾವಣೆ ಕುರಿತು ಮೂಗು ತೂರಿಸಲು ಬಂದ ಪಾಕ್‌ ಸಚಿವರನ್ನು ದೆಹಲಿ ಸಿಎಂ ಕೇಜ್ರಿವಾಲ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

ಶುಕ್ರವಾರ ಟ್ವೀಟ್‌ ಮಾಡಿದ್ದ ಪಾಕ್‌ ಸಚಿವ ಫ‌ವಾದ್‌ ಹುಸೇನ್‌, “ದೆಹಲಿ ಚುನಾವಣೆಯಲ್ಲಿ ಭಾರತೀಯರು ಮೋದಿಯವರ ಹುಚ್ಚುತನವನ್ನು ಸೋಲಿಸಬೇಕು. ಮತ್ತೂಂದು ರಾಜ್ಯವನ್ನು ಕಳೆದುಕೊಳ್ಳುವ ಭೀತಿಯಿಂದ ಮೋದಿಯವರು ಅಸಂಬದ್ಧ ಆರೋಪ ಮಾಡುವ, ಭಯದ ವಾತಾವರಣ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದರು.

ಇದಕ್ಕೆ ಖಡಕ್ಕಾಗಿ ತಿರುಗೇಟು ನೀಡಿರುವ ಸಿಎಂ ಕೇಜ್ರಿವಾಲ್‌, “ದೆಹಲಿ ಚುನಾವಣೆಯು ಭಾರತದ ಆಂತರಿಕ ವಿಚಾರ. ನರೇಂದ್ರ ಮೋದಿಯವರು ಭಾರತದ ಪ್ರಧಾನಿ. ಅವರು ನನ್ನ ಪ್ರಧಾನಿಯೂ ಹೌದು. ನಮ್ಮ ದೇಶದ ಆಂತರಿಕ ವಿಚಾರದಲ್ಲಿ ಭಯೋತ್ಪಾದನೆಯ ಪ್ರಾಯೋಜಕರಾದ ನೀವು ಮಧ್ಯಪ್ರವೇಶಿಸುವ ಅಗತ್ಯವಿಲ್ಲ’ ಎಂದಿದ್ದಾರೆ. ಪಾಕಿಸ್ತಾನ ಎಷ್ಟೇ ಪ್ರಯತ್ನಿಸಿದರೂ, ಭಾರತದ ಏಕತೆಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next