Advertisement

ಮೋದಿ ದೇಶ ಕಂಡ ಬೊಗಳೆ ದಾಸ: ಉಗ್ರಪ್ಪ

10:28 PM Dec 31, 2019 | Lakshmi GovindaRaj |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶ ಕಂಡ ಬೊಗಳೆ ದಾಸ ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನರೇಂದ್ರ ಮೋದಿ ಪ್ರಧಾನಿಯಾಗಿ ಆರು ವರ್ಷದಲ್ಲಿ ತುಮಕೂರಿಗೆ ನಾಲ್ಕು ಬಾರಿ ಭೇಟಿ ನೀಡಿ ನಾಲ್ಕು ಪ್ರಮುಖ ಭರವಸೆಗಳನ್ನು ನೀಡಿದ್ದರು.

Advertisement

ಆದರೆ, ಇದುವರೆಗೂ ಯಾವುದೇ ಭರವಸೆ ಈಡೇರಿಸಿಲ್ಲ. ಈಗ ಐದನೇ ಬಾರಿಗೆ ಜ.2ರಂದು ತುಮಕೂರಿಗೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಮೋದಿಗೆ ಬದ್ಧತೆ ಇದ್ದರೆ ರಾಜ್ಯಕ್ಕೆ ತಮ್ಮ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು. ಇಲ್ಲದಿದ್ದರೆ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next