Advertisement

ರಾಜ್ಯದ ಕೋವಿಡ್ ಕ್ರಮಗಳ ಬಗ್ಗೆ ಮೆಚ್ಚುಗೆ ಸೂಚಿಸಿದ ಪ್ರಧಾನಿ ಮೋದಿ

12:37 PM Apr 11, 2021 | Team Udayavani |

ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೆಚ್ಚುಗೆ ಸೂಚಿಸಿದರು.

Advertisement

ಪ್ರಧಾನಮಂತ್ರಿ ನರೇಂದ್ರ ಮೋದಿಯರವರೊಂದಿಗೆ ಇಂದು ಮಾತನಾಡಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ರಾಜ್ಯದ ಕ್ರಮಗಳ ಬಗ್ಗೆ ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ, ಮೈಕ್ರೋಕಂಟೈನ್ಮೆಂಟ್ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಕೋವಿಡ್ 19 : ಧಾರ್ಮಿಕ ಸ್ಥಳಗಳಲ್ಲಿ ಗುಂಪುಗೂಡುವಿಕೆಗೆ ಅವಕಾಶವಿಲ್ಲ: ಉ. ಪ್ರ ಸರ್ಕಾರ   

ಸುಧಾಕರ್ ಸಭೆ: ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ತಜ್ಞರ ಜೊತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಇಂದು ಸಭೆ ನಡೆಸಿದರು. ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ತಜ್ಞರಾದ ಡಾ. ಸುದರ್ಶನ್, ಡಾ.ಮಂಜುನಾಥ್, ಡಾ. ರವಿ, ಡಾ.ಗಿರಿಧರ್ ಬಾಬು ಸೇರಿದಂತೆ ಹಲವರು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next