Advertisement

ಕಾಂಗ್ರೆಸ್‌ಗೆ ಡೋಸ್‌ ಕೊಡಲು ರಾಜ್ಯಕ್ಕೆ ಮೋದಿ ಪದೇ ಪದೆ ಬರುತ್ತಾರೆ!

12:16 AM Feb 15, 2023 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪದೇಪದೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವಿಚಾರ ವಿಧಾನ ಪರಿಷತ್‌ನಲ್ಲಿ ಮಂಗಳವಾರ ಪ್ರತಿಧ್ವನಿಸಿ ಕೆಲಕಾಲ ಆಡಳಿತ ಮತ್ತು ವಿಪಕ್ಷಗಳ ಮುಖಂಡರ ವಾಕ್ಸಮರಕ್ಕೆ ಕಾರಣವಾಯಿತು.

Advertisement

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್‌ ಸದಸ್ಯ ಯು.ಬಿ. ವೆಂಕಟೇಶ್‌, ಈ ಹಿಂದೆ ರಾಜ್ಯ ಭೀಕರ ನೆರೆ ಪ್ರವಾಹದಿಂದ ನಲುಗಿ ಹೋಗಿತ್ತು. ಆಗ ರಾಜ್ಯದ ಜನರ ನೆರವಿಗೆ ಬಾರದ ಪ್ರಧಾನಿ ನರೇಂದ್ರ ಮೋದಿ ಇದೀಗ ಪದೇಪದೆ ರಾಜ್ಯಕ್ಕೆ ಭೇಟಿ ನೀಡುತ್ತಾರೆಂದು ಛೇಡಿಸಿದರು.

ಇದರಿಂದ ಕೆರಳಿದ ಸರಕಾರ ಮುಖ್ಯ ಸಚೇತಕ ವೈ.ಎ. ನಾರಾಯಣ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ಗೆ ಡೋಸ್‌ ನೀಡಲು ಆಗಾಗ್ಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next