Advertisement

Modi ‘ಶಿವಲಿಂಗದ ಮೇಲಿನ ಚೇಳು’ ಹೇಳಿಕೆ: ಶಶಿ ತರೂರ್‌ಗೆ ಹಿನ್ನಡೆ

12:11 AM Aug 30, 2024 | Team Udayavani |

ಹೊಸದಿಲ್ಲಿ: ಪ್ರಧಾನಿ ಮೋದಿ ಅವರನ್ನು “ಶಿವಲಿಂಗದ ಮೇಲೆ ಕುಳಿತ ಚೇಳು’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಶಿ ತರೂರ್‌ ಮೇಲಿನ ಮಾನನಷ್ಟ ಪ್ರಕರಣ ರದ್ದುಪಡಿಸಲು ದಿಲ್ಲಿ ಹೈಕೋರ್ಟ್‌ ನಿರಾಕರಿಸಿದೆ. 2020ರಲ್ಲಿ ತರೂರ್‌ ವಿರುದ್ಧದ ಕ್ರಿಮಿನಲ್‌ ಮೊಕದ್ದಮೆಗೆ ತಡೆ ನೀಡಿದ್ದ ಹೈಕೋರ್ಟ್‌, ಈಗ ಮಧ್ಯಾಂತರ ಆದೇಶ ತೆರವುಗೊಳಿಸಿ ಸೆ.10ರಂದು ಈ ಕುರಿತು ಮತ್ತೂಮ್ಮೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ. 2018ರ ಬೆಂಗಳೂರು ಲಿಟ್‌ ಫೆಸ್ಟ್‌ನಲ್ಲಿ ತರೂರ್‌ರ ವಿವಾದಾತ್ಮಕ ಹೇಳಿಕೆಯಿಂದಾಗಿ ಶಿವ ಭಕ್ತರ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ ಎಂದು ಬಿಜೆಪಿ ನಾಯಕ ರಾಜೀವ್‌ ಬಬ್ಬರ್‌ ಕ್ರಿಮಿನಲ್‌ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next