Advertisement

ಮೋದಿ, ಶಾ ಅಣತಿಯಂತೆ ಸಂಪುಟ ರಚನೆ: ಈಶ್ವರಪ್ಪ

11:20 PM Aug 20, 2019 | Team Udayavani |

ಮೈಸೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರ ದೂರದೃಷ್ಟಿ ಹಾಗೂ ಅಣತಿಯಂತೆ ಸಚಿವ ಸಂಪುಟ ರಚನೆಯಾಗಿದೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಮಂಗಳವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕುಟುಂಬ ಸಮೇತರಾಗಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

Advertisement

ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ನಾಯಕತ್ವದಲ್ಲಿ ದೇಶ ಅಭಿವೃದ್ಧಿಯತ್ತ ಮುನ್ನಡೆಯುತ್ತಿದ್ದು, ಅದೇ ಮಾದರಿಯಲ್ಲಿ ರಾಜ್ಯವೂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಭಿವೃದ್ಧಿಯಾಗಲಿದೆ. ಸಚಿವ ಸಂಪುಟ ರಚನೆ ಸಮಯದಲ್ಲಿ ಕೆಲವರಿಗೆ ಅಸಮಾಧಾನ ಆಗುವುದು ಸಹಜ. ಅದನ್ನು ಪಕ್ಷದ ಮುಖಂಡರು ಮಾತನಾಡಿ ಬಗೆಹರಿಸುತ್ತಾರೆ ಎಂದರು. “ಯಾವುದೇ ಖಾತೆ ಕೊಟ್ಟರೂ ನಾನು ಯಶಸ್ವಿಯಾಗಿ ಕೆಲಸ ಮಾಡುತ್ತೇನೆ. ಈ ಹಿಂದೆ ಇಂಧನ, ಗ್ರಾಮೀಣಾಭಿವೃದ್ಧಿ ಸೇರಿ ಹಲವು ಖಾತೆಗಳನ್ನು ನಿಭಾಯಿಸಿದ್ದೇನೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next