Advertisement

ಅತೃಪ್ತ ಶಾಸಕರ ಭವಿಷ್ಯ ಮೋದಿ, ಶಾ ಕೈಯಲ್ಲಿದೆ; ಬಿವೈ ರಾಘವೇಂದ್ರ ಹೇಳಿದ್ದೇನು?

08:55 AM Jul 25, 2019 | Nagendra Trasi |

ನವದೆಹಲಿ: ಬಿಎಸ್ ಯಡಿಯೂರಪ್ಪನವರಿಗೆ ಈಗ ಜವಾಬ್ದಾರಿ ಹೆಚ್ಚಾಗಿದೆ. ಅತೃಪ್ತ ಶಾಸಕರ ಭವಿಷ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಭೇಟಿಯ ನಂತರ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Advertisement

ಬುಧವಾರ ಖಾಸಗಿ ಟಿವಿ ಚಾನೆಲ್ ಜತೆ ಮಾತನಾಡಿದ ಅವರು, ಅತೃಪ್ತ ಶಾಸಕರಿಗೆ ಮಂತ್ರಿ ಸ್ಥಾನದ ಬಗ್ಗೆ ಹೇಳೋದಕ್ಕೆ ಆಗಲ್ಲ. ಯಾಕೆಂದರೆ ಅತೃಪ್ತರು ತಮ್ಮ ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಟ್ಟಿದ್ದಾರೆ. ಅವರು ತಮ್ಮ ಪಕ್ಷಕ್ಕೆ ಇನ್ನೂ ರಾಜೀನಾಮೆ ಕೊಟ್ಟಿಲ್ಲ ಎಂದರು.

ಒಂದು ವರ್ಷದಿಂದ ರಾಜ್ಯದಲ್ಲಿ ಸರ್ಕಾರ ಇದ್ದು ಇಲ್ಲದಂತಾಗಿತ್ತು. ಹೀಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಆಡಳಿತದ ಪಕ್ಷದ ಅಧಿಕಾರದಲ್ಲಿ ಇದ್ದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next