Advertisement

Congress ಬ್ಯಾಂಕ್‌ ಖಾತೆ ಸ್ಥಗಿತಕ್ಕೆ ಮೋದಿ, ಶಾ ಕೈವಾಡ: ಗೆಹ್ಲೋಟ್‌

12:53 AM Mar 23, 2024 | Team Udayavani |

ಜೈಪುರ/ಪುಣೆ: ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳನ್ನು ಸ್ಥಗಿತ ಮಾಡಿರುವ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ ನಾಯಕರು ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಜೈಪುರದಲ್ಲಿ ಮಾತನಾಡಿದ ರಾಜಸ್ಥಾನ ಮಾಜಿ ಸಿಎಂ ಅಶೋಕ್‌ ಗೆಹ್ಲೋಟ್‌ ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದ್ದಾರೆ. ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಬಂಧನವನ್ನು ಉಲ್ಲೇಖಿಸಿ, ಬಿಜೆಪಿಯು ಚುನಾವಣೆ ಗೆಲ್ಲಲು ಯಾವ ಹಂತಕ್ಕಾದರೂ ಹೋಗುತ್ತದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಹೇಳಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಮತ್ತು ಶಾ ಅವರ ಆಜ್ಞೆ ಇಲ್ಲದೇ ಕೇಂದ್ರ ಸರಕಾರದಲ್ಲಿ ಒಂದು ಎಲೆ ಕೂಡ ಅಲ್ಲಾಡುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತಕ್ಕೆ ಈ ನಾಯಕರೇ ಕಾರಣ ಎಂದು ಪರೋಕ್ಷವಾಗಿ ಹೇಳಿದರು.

ಮಧ್ಯಪ್ರವೇಶಿಸಲಿ

ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳನ್ನು ಸ್ಥಗಿತ ಮಾಡಿರುವುದು ಅಸಾಂವಿಧಾನಿಕ. ಇದರಿಂದಾಗಿ ಚುನಾವಣ ಪ್ರಚಾರಕ್ಕೆ ಹಣವನ್ನು ಪಡೆದುಕೊಳ್ಳಲಾ ಗುತ್ತಿಲ್ಲ. ಈ ವಿಷಯದಲ್ಲಿ ಚುನಾವಣ ಆಯೋಗ ಮಧ್ಯ ಪ್ರವೇಶಿಸಬೇಕು ಎಂದು ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕ ಪೃಥ್ವಿರಾಜ್‌ ಚವಾಣ್‌ ಅವರು ಪುಣೆಯಲ್ಲಿ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next