Advertisement

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

05:04 PM Apr 27, 2024 | Team Udayavani |

ದಾವಣಗೆರೆ: ಕಳೆದ ವಿಧಾನಸಭೆಯಲ್ಲಿ ಬಿಜೆಪಿಯನ್ನು ಕನ್ನಡಿಗರು ಸೋಲಿಸಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರ ನೀಡದೆ ಕರ್ನಾಟಕದ ಮೇಲೆ ಸೇಡು ತೆಗೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ ಆರೋಪಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವರಿಬ್ಬರಿಗೂ ಕರ್ನಾಟಕಕ್ಕೆ ಆಗಮಿಸಿ ಜನತೆಯ ಮತ ಕೇಳುವ ನೈತಿಕತೆ ಇಲ್ಲ. ಇವರು ಕನ್ನಡಿಗರಿಗೆ ವಿಶೇಷವಾಗಿ ರಾಜ್ಯದ ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದರು.

ಪೂರ್ಣ ಪ್ರಮಾಣದ ಬರ ಪರಿಹಾರ ನೀಡದೇ ರಾಜ್ಯಕ್ಕೆ ಬಂದರೆ ರಾಜ್ಯದ‌ ಜನ ಗೋ ಬ್ಯಾಕ್ ಹೋರಾಟ ಮಾಡಬೇಕು‌. ಕಾಂಗ್ರೆಸ್ ಕೂಡ ಈ ಹೋರಾಟ ಮಾಡಲಿದೆ. ರಾಜ್ಯದಲ್ಲಿ ಭೀಕರ ಬರ ಇದೆ. ಕುಡಿಯವ ನೀರು, ಜಾನುವಾರುಗಳಿಗೆ ಮೇವು ಬೇಕಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಪರಿಹಾರ ಕೇಳಿದರೆ ಮೋದಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ ಎಂದರು.

ಕನ್ನಡಿಗರು ಅವರಿಗೆ ಈ ಲೋಕಸಭೆ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ. ಕಳೆದ ಲೋಕಸಭೆ ಚುನಾವಣೆಯ ಸಂಖ್ಯೆ ಉಲ್ಟಾ ಆಗಲಿದ್ದು 27 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಸುರ್ಜೇವಾಲಾ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next