Advertisement

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

10:02 PM Apr 30, 2024 | Team Udayavani |

ಬೆಳಗಾವಿ:ವಿದೇಶದಲ್ಲಿ ನನ್ನ ಮಗ ಮೃತಪಟ್ಟಾಗ ನರೇಂದ್ರ ಮೋದಿ ಹಾಗೂ ಸುಷ್ಮಾ ಸ್ವರಾಜ್‌ ಸಹಾಯ ಮಾಡಿದ್ದಾರೆ ಎಂಬುದು ಸಂಪೂರ್ಣ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Advertisement

ಗೋಕಾಕದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನ ಮಗ ಮೃತಪಟ್ಟಾಗ ಯಾರೂ ನನ್ನನ್ನು ಸಂಪರ್ಕ ಮಾಡಿಯೇ ಇಲ್ಲ. ನಾನು ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಯಾರ ಜತೆಗೂ ಮಾತನಾಡಿಲ್ಲ. ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನನ್ನ ಮಗನು ವಿದೇಶದಲ್ಲಿ ಸತ್ತ. ಇಲ್ಲಿಗೆ ಮೃತದೇಹ ತಂದು ಅಂತ್ಯಕ್ರಿಯೆ ಮಾಡಿದ್ದೇನೆ. ಈ ಸಂದರ್ಭದಲ್ಲಿ ಮೋದಿ ಅವರನ್ನಾಗಲೀ ಅಥವಾ ಬೇರೆ ಯಾರನ್ನಾಗಲೀ ಸಂಪರ್ಕಿಸುವ ಪ್ರಮೇಯವೇ ಬರಲಿಲ್ಲ. ಇವರೆಲ್ಲ ಸುಳ್ಳು ಹೇಳುತ್ತಿದ್ದಾರೆ.

ಕಾಂಗ್ರೆಸ್‌ ಪಕ್ಷ 55 ವರ್ಷ ಅಧಿ ಕಾರ ಮಾಡಿದೆ. ಯಾವುದೇ ಮಹಿಳೆಯರ ತಾಳಿ ಕಿತ್ತುಕೊಂಡಿಲ್ಲ. ಇದಲ್ಲದೆ ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಅಲ್ಲಿ ಯಾವುದಾದರೂ ಮಹಿಳೆಯ ತಾಳಿ ಕಿತ್ತುಕೊಂಡಿದ್ದಾರೆ. ಚುನಾವಣೆಗಾಗಿ ಪ್ರಧಾನಿಯಾದವರು ಬರೀ ಸುಳ್ಳು ಹೇಳುವದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next