Advertisement

ಮೋದಿ ಆಟ ನಡೆಯಲ್ಲ,ನಾನು ಸಿಎಂ ರೇಸ್‌ನಲ್ಲಿಲ್ಲ

06:20 AM May 05, 2018 | Team Udayavani |

ಬೆಂಗಳೂರು: ಸಿದ್ದರಾಮಯ್ಯ ಅವರನ್ನೇ ಮುಂದಿನ ಮುಖ್ಯಮಂತ್ರಿ ಎಂದು ನಾವು ಒಪ್ಪಿಕೊಂಡಿದ್ದೇವೆ. ಅವರ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತಿದ್ದು, ಅವರೇ ನಮ್ಮ ನಾಯಕರು ಎಂದು ಕೆಪಿಸಿಸಿಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಬೆಂಗಳೂರು ಪ್ರಸ್‌ ಕ್ಲಬ್‌ ಮತ್ತು ವರದಿಗಾರರ ಕೂಟ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಈ ಬಾರಿ ಸಿಎಂ ರೇಸ್‌ನಲ್ಲಿಲ್ಲ. ನನಗೆ ಅವಸರ ಇಲ್ಲ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಜವಾಬ್ದಾರಿ ಎಂದರು. ದಲಿತ ಮುಖ್ಯಮಂತ್ರಿ ವಿಷಯ ಕುರಿತು ಪ್ರತಿಕ್ರಿಯಿಸಿ ದೇವೇಗೌಡರು ತಮ್ಮ ಮಗನ ಬದಲು ದಲಿತರಿಗೆ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಹೇಳಲಿ, ಬಿಜೆಪಿಯಲ್ಲಿ ಲಿಂಗಾಯತರ ಬಿಟ್ಟು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಲಿ ನೋಡೋಣ ಎಂದು ಸವಾಲು ಹಾಕಿದರು. ನರೇಂದ್ರ ಮೋದಿಯ ಆಟ ದಕ್ಷಿಣ ಭಾರತದಲ್ಲಿ ನಡೆಯುವುದಿಲ್ಲ. ದೇಶದ ಜನತೆ ಮೋದಿ ನಾಯಕತ್ವವನ್ನು ತಿರಸ್ಕರಿಸುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next