Advertisement

ನೂತನ ಸಿಎಂ ಬೊಮ್ಮಾಯಿಗೆ ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ

12:02 PM Jul 28, 2021 | Team Udayavani |

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಅಭಿನಂದನೆ ತಿಳಿಸಿರುವ ಮೋದಿ, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರವಾಣ ವಚನ ಸ್ವೀಕರಿಸಿದ್ದಕ್ಕೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

Advertisement

ಅವರು ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ.  ಕರ್ನಾಟಕದಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದಿದ್ದಾರೆ. ಅವರ ಫಲಪ್ರದ ಅಧಿಕಾರಾವಧಿಗೆ ಶುಭಾಶಯಗಳು.

ಯಡಿಯೂರಪ್ಪ ಅವರನ್ನು ಹೊಗಳಿದ ಮೋದಿ

ಟ್ವೀಟ್ ನಲ್ಲಿ ಮತ್ತೊಂದು ಅಂಶವನ್ನು ತಿಳಿಸಿರುವ ಮೋದಿ, ಕರ್ನಾಟಕದ ಅಭಿವೃದ್ಧಿಗೆ ಹಾಗೂ ಪಕ್ಷದ ಅಭಿವೃದ್ಧಿಗೆ ಯಡಿಯೂರಪ್ಪ ಸಲ್ಲಿಸಿರುವ ಸೇವೆಯನ್ನು ಪದಗಳಿಂದ ಹೇಳಿ ನ್ಯಾಯ ಒದಗಿಸಲು ಸಾಧ್ಯವಿಲ್ಲ.  ಕರ್ನಾಟಕದ ಅಭಿವೃದ್ಧಿಗೆ ದಶಕಗಳಿಂದ ಶ್ರಮಿಸಿದ್ದಾರೆ. ಕರ್ನಾಟಕದ ಉದ್ದಗಲಕ್ಕೂ ಸಂಚರಿಸಿದ ಎಲ್ಲರ ಮೆಚ್ಚುಗೆ ಪಡೆಸಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪರನ್ನು ಪ್ರಧಾನಿ ಹೊಗಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next