Advertisement

ಸತೀಶ್‌ಗೆ ಮೋದಿ ಘೋಷಣೆ ಸ್ವಾಗತ

06:43 AM May 09, 2019 | Lakshmi GovindaRaj |

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಸಚಿವ ಸತೀಶ ಜಾರಕಿಹೊಳಿ ಪ್ರಚಾರ ನಡೆಸಿದರು. ಗ್ರಾಮಕ್ಕೆ ಆಗಮಿಸಿದ ಸಚಿವರಿಗೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗುವ ಮೂಲಕ ಸ್ವಾಗತ ಕೋರಿದರು.

Advertisement

ಇದರಿಂದ ಸಚಿವರು ಇರಸು ಮುರುಸುಗೊಂಡಂತೆ ಭಾಸವಾಯಿತು. ಇದಕ್ಕೂ ಮೊದಲು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಸಚಿವ ಸಂಪುಟದಲ್ಲಿ ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಿ ಮರಳಿ ಪಡೆದಿರುವುದು ತಪ್ಪು.

ಆ ತಪ್ಪು ನಡೆದು ಹೋಗಿದ್ದು, ಇದೀಗ ಏನೂ ಮಾಡಲು ಸಾಧ್ಯವಿಲ್ಲ ಎಂದರು. ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರ ಹೇಳಿಕೆ ಸಮರ್ಥಿಸಿಕೊಂಡ ಸತೀಶ ಜಾರಕಿಹೊಳಿ, ರಮೇಶ ಅವರಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗಲ್ಲ. ಕಳೆದೊಂದು ವರ್ಷದಿಂದ ಬಿಜೆಪಿಯವರು ಸರಕಾರ ಬೀಳುತ್ತೆ ಅಂತ ಕನಸು ಕಾಣುತ್ತಿದ್ದಾರೆ.

ಆದರೆ, ಅವರ ಆಸೆ ಆಸೆಯಾಗಿಯೇ ಉಳಿಯುತ್ತಿದೆಯೇ ಹೊರತು ಅದು ನನಸಾಗಲ್ಲ. ಕುಂದಗೋಳ, ಚಿಂಚೋಳಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎರಡೂ ಕಡೆ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next