Advertisement

ಮೋದಿಜೀಯ ರಾಜಕೀಯ ಲಾಭದ ನೀತಿಯೇ ಉಗ್ರರ ಅಟ್ಟಹಾಸಕ್ಕೆ ಕಾರಣ!ರಾಹುಲ್

04:56 PM Jul 12, 2017 | Team Udayavani |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಪಕಾಲಾವಧಿಯ ರಾಜಕೀಯ ಲಾಭದ ನೀತಿಯಿಂದಾಗಿ ಜಮ್ಮು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸಗೈಯುವಂತಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

Advertisement

ಅಮರನಾಥ ಯಾತ್ರಾರ್ಥಿಗಳ ಮೇಲೆ ಸೋಮವಾರ ಲಷ್ಕರ್ ಉಗ್ರರು ನಡೆಸಿದ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಅವರ ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಜತೆಗಿನ ಮೈತ್ರಿ ಮಾಡಿಕೊಂಡಿದ್ದರಿಂದ ಭಾರತ ಭಾರೀ ಬೆಲೆ ತೆರುವಂತಾಗಿದೆ ಎಂದು ರಾಹುಲ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಪಿ, ಬಿಜೆಪಿ ಮೈತ್ರಿಯಿಂದ ಅಮಾಯಕ ಭಾರತೀಯರ ರಕ್ತ ಹರಿಯುವಂತಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next