Advertisement

ನಮಗಂತೂ ಮೋದಿ ಭಾಷಣ ನಿರಾಸೆ ತಂದಿದೆ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

11:58 AM Apr 14, 2020 | keerthan |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮೇ ಮೂರನೇ ತಾರೀಖಿನ ವರೆಗೂ ಲಾಕ್ ಡೌನ್ ಮುಂದುವರೆಸಿದ್ದಾರೆ. ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಯವರಿಂದ ಬಹಳ ನಿರೀಕ್ಷೆ ಮಾಡಿದ್ದೆವು. ನಮಗಂತೂ ಮೋದಿ ಭಾಷಣ ನಿರಾಸೆ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

Advertisement

ಪ್ರಧಾನಿಯವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,  ದೇಶದ ಹಿತಕ್ಕಾಗಿ ಅವರದ್ದೇ ಆದ ರೀತಿಯ ಸಂದೇಶ ನೀಡಿದ್ದಾರೆ. ರಿಯಾಯಿತಿ ಕೊಡ್ತಾರೆ ಅಂದುಕೊಂಡಿದ್ದೆವು. ಕಾರ್ಮಿಕರು ಮತ್ತು ಉದ್ಯಮಿಗಳು ಮತ್ತು ರೈತರಿಗೆ ವಿನಾಯತಿ ಕೊಡ್ತಾರೆ ಅಂದುಕೊಂಡಿದ್ದೆವು. ಇದರ ಬಗ್ಗೆ ಏನು ಹೇಳಿಲ್ಲ. ನಾವು ಸಹಕಾರ ಕೊಡ್ತೀವಿ ಅದ್ರೆ ಯಾವುದೇ ವಿನಾಯಿತಿ ಕೊಡದಿರುವುದು ಬೇಸರ ತಂದಿದೆ ಎಂದರು.

ವೈದ್ಯರಿಗೆ ಒಳ್ಳೆಯ ಕಿಟ್ ಕೊಡುತ್ತಿಲ್ಲ. ಬೇರೆ ಬೇರೆ ದೇಶಗಳಲ್ಲಿ ಒಳ್ಳೆಯ ಕಿಟ್ ಕೊಟ್ಟಿದ್ದಾರೆ. ವೈದ್ಯರು, ಪೊಲೀಸರು, ಮಾಧ್ಯಮಗಳಲ್ಲಿ ಕೆಲಸ ಮಾಡುವವರಿಗೆ ಒಳ್ಳೆಯ ಕಿಟ್ ಕೊಡಲಿ. ನಮಗಂತೂ ಮೋದಿ ಭಾಷಣ ನಿರಾಸೆ ತಂದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next