Advertisement

Master Chef India ಪ್ರಶಸ್ತಿ ಮುಡಿಲಿಗೇರಿಸಿದ ಮಂಗಳೂರಿನ ಮುಹಮ್ಮದ್ ಆಶಿಕ್

11:27 AM Dec 09, 2023 | Team Udayavani |

ಮಂಗಳೂರು: ಮುಂಬಯಿಯಲ್ಲಿ ಸೋನಿ ಲೈವ್ ಒಟಿಟಿ ವೇದಿಕೆ ಆಯೋಜಿಸಿದ ಮಾಸ್ಟರ್ ಶೆಫ್ ಇಂಡಿಯಾ ಸ್ಪರ್ದೇಯ ಫೈನಲ್ ಸ್ಪರ್ಧೆಯಲ್ಲಿ ಮಂಗಳೂರಿನ ಯುವಕ ಮುಹಮ್ಮದ್ ಆಶಿಕ್ ಅವರು ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.

Advertisement

ಈ ಸ್ಪರ್ಧೆಯಲ್ಲಿ ಅಂತಿಮ ಸುತ್ತು ತಲುಪಿದ ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಸೇರಿದಂತೆ ನಾಲ್ವರಲ್ಲಿ ಮುಹಮ್ಮದ್ ಆಶಿಕ್ ಒಬ್ಬಾರಗಿದ್ದರು. ಶುಕ್ರವಾರ ಸ್ಪರ್ಧೆಯ ಫೈನಲ್ ಸಂಚಿಕೆ ವಿಜೇತರಾಗಿ ಹೊರ ಹೊಮ್ಮಿದ್ದಾರೆ. ಅಲ್ಲದೆ ಈ ಸ್ಪರ್ಧೆಯನ್ನು ಗೆದ್ದ ದಕ್ಷಿಣ ಭಾರತದ ಪ್ರಥಮ ಸ್ಪರ್ಧಿ ಎಂಬ ಹೆಗ್ಗಳಿಯನ್ನು ಅವರು ಪಡೆದಿದ್ದಾರೆ.

ಇದನ್ನೂ ಓದಿ:Kunigal: ಟ್ರ್ಯಾಕ್ಟರ್ ಉರುಳಿ ಬಿದ್ದು ಮುಖ್ಯಮಂತ್ರಿ ಪದಕ ಪುರಸ್ಕೃತ ಅರಣ್ಯ ವೀಕ್ಷಕ ಮೃತ್ಯು

ಇವರು ಮಂಗಳೂರಿನ ಜೆಪ್ಪು ಮಹಾಕಾಳಿಪಡ್ಪುವಿನ ಆಶಿಕ್ ಅವರು ಅಬ್ದುಲ್ ಖಾದರ್-ಸಾರಮ್ಮ ದಂಪತಿಯ ಪುತ್ರ.

Advertisement

Udayavani is now on Telegram. Click here to join our channel and stay updated with the latest news.

Next