Advertisement

ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್ ಗೆ ರಾಷ್ಟ್ರಪತಿ ಪದಕ ಪ್ರದಾನ

01:40 PM Nov 09, 2022 | Team Udayavani |

ಉಡುಪಿ : ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮೀರ್ ಮುಹಮ್ಮದ್ ಗೌಸ್ 2021ನೇ ಸಾನಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ಸೋಮವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸ್ವೀಕರಿಸಿದರು.

Advertisement

1992ರಲ್ಲಿ ಅಗ್ನಿಶಾಮಕ ಇಲಾಖೆಗೆ ಸೇರ್ಪಡೆಗೊಂಡ ಇವರು, 30ವರ್ಷ ಗಳ ಸೇವಾ ಅವಧಿಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಪದೋನ್ನತಿ ಹೊಂದಿ ಪ್ರಸ್ತುತ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ನಿಸ್ವಾರ್ಥ ಸೇವೆಯ ಗೌರವಾರ್ಥವಾಗಿ ಇವರಿಗೆ ಇಲಾಖೆಯು 33 ಬಾರಿ ನಗದು ಬಹುಮಾನಗಳು, 2 ಉತ್ತಮ ಸೇವೆ ಪತ್ರಗಳನ್ನು ನೀಡಲಾಗಿದೆ. ಇವರಿಗೆ 2012ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ : ಕೆಪಿಸಿಸಿಯವರು ಸತೀಶ್ ಜಾರಕಿಹೊಳಿ ಮೇಲೆ ಶಿಸ್ತುಕ್ರಮ ಜರುಗಿಸಲಿ: ಬಿಎಸ್‌ ವೈ

Advertisement

Udayavani is now on Telegram. Click here to join our channel and stay updated with the latest news.

Next