Advertisement

ಮಾದಾರ ಚನ್ನಯ್ಯ ಗುರುಪೀಠಕ್ಕೆ ಮೋಹನ್‌ ಭಾಗವತ್‌ ಭೇಟಿ

12:20 AM Jul 12, 2022 | Team Udayavani |

ಚಿತ್ರದುರ್ಗ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕರಾದ ಮೋಹನ್‌ ಭಾಗವತ್‌ ಅವರು ಸೋಮವಾರ ರಾತ್ರಿ 7.20ರ ಸುಮಾರಿಗೆ ಇಲ್ಲಿನ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದ್ದು, ಮಠದಲ್ಲೇ ವಾಸ್ತವ್ಯ ಹೂಡಿದರು. ಸಹಸರ ಕಾರ್ಯ ವಾಹ ಮುಕುಂದ್‌, ಮುಖಂಡ ರಾದ ನ. ತಿಪ್ಪೇಸ್ವಾಮಿ, ಮುಕುಂದ್‌, ಕೇಂದ್ರ ಹಾಗೂ ರಾಜ್ಯದ ಸಚಿವರು ಮತ್ತು ಇತರ ನಾಯಕರು ಉಪಸ್ಥಿತರಿದ್ದರು.

Advertisement

ಇಂದು ಸಂವಾದ
ಭಾಗವತ್‌ ಅವರು ಮಂಗಳ ವಾರ ಬೆಳಗ್ಗೆ 10 ಗಂಟೆಗೆ ಮಾದಾರ ಚನ್ನಯ್ಯ ಗುರುಪೀಠದಲ್ಲಿ ದಲಿತ, ಹಿಂದುಳಿದ ಸುಮಾರು 20ಕ್ಕೂ ಹೆಚ್ಚು ಮಠಾಧಿಧೀಶರ ಜತೆ ಸಂವಾ ದದಲ್ಲಿ ಭಾಗಿಯಾಗಲಿದ್ದಾರೆ. ಅಪರಾಹ್ನ 3 ಗಂಟೆ ಹೊತ್ತಿಗೆ ಬೆಂಗಳೂರಿಗೆ ಮರಳುವರು.

ಭಾಗವತ್‌ – ಸಿಎಂ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಮೋಹನ್‌ ಭಾಗವತ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ನಡೆಯುವ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಭಾಗವತ್‌ ಅವರು ಸೋಮವಾರ ಬೆಂಗಳೂರಿನ ಚಾಮರಾಜಪೇಟೆಯ ಆರೆಸ್ಸೆಸ್‌ ಕಚೇರಿಗೆ ಆಗಮಿಸಿದ್ದು, ಅಲ್ಲಿ ಮುಖ್ಯಮಂತ್ರಿಗಳು ಭೇಟಿಯಾಗಿ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿ ದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next