Advertisement

ಮೋಹನದಾಸ ಪೈ ಸಹಿತ ಮೂವರಿಗೆ ಗೌರವ ಡಾಕ್ಟರೇಟ್‌

02:44 AM Oct 05, 2020 | Hari Prasad |

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವವು ಅ.5ರಂದು ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಔದ್ಯೋಗಿಕ ಮತ್ತು ಸಾಂಸ್ಥಿಕ ಹಣಕಾಸು ಕ್ಷೇತ್ರಕ್ಕಾಗಿ ಮೋಹನದಾಸ ಪೈ ಸೇರಿ ಮೂವರಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಲಾಗುವುದು ಎಂದು ಕುಲಪತಿ ಪ್ರೊ| ಎಂ. ರಾಮಚಂದ್ರ ಗೌಡ ಹೇಳಿದರು.

Advertisement

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರೀಡಾ ಮತ್ತು ಸಮಾಜ ಸೇವೆಯ ಕ್ಷೇತ್ರಕ್ಕಾಗಿ ಗೋವಿಂದರಾಜ್‌ ಅವರಿಗೆ ಹಾಗೂ ಧಾರ್ಮಿಕ – ಸಮಾಜ ಸೇವೆ-ಶೈಕ್ಷಣಿಕ ಕ್ಷೇತ್ರಕ್ಕಾಗಿ ಹುಬ್ಬಳ್ಳಿ ಮೂರುಸಾವಿರ ಮಠದ ಶ್ರೀಮನ್‌ ಮಹಾರಾಜ ನಿರಂಜನ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮಿಗಳಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗುವುದು ಎಂದರು.

ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಧ್ಯಕ್ಷತೆ ವಹಿಸಲಿದ್ದು, ಉಪ ಮುಖ್ಯಮಂತ್ರಿ ಹಾಗೂ ಸಹ ಕುಲಾಧಿಪತಿಗಳಾದ ಅಶ್ವತ್ಥ ನಾರಾಯಣ ಅತಿಥಿಗಳಾಗಿರುವರು. ಬೆಂಗಳೂರಿನ ನ್ಯಾಕ್‌ ನಿರ್ದೇಶಕ ಪ್ರೊ| ಎಸ್‌.ಸಿ. ಶರ್ಮಾ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next