Advertisement

ಮೊಯ್ಲಿಗೆ ತಮ್ಮ ಕ್ಷೇತ್ರ ನೋಡಿಕೊಳ್ಳಲು ಆಗುತ್ತಿಲ್ಲ: ಬಿಎಸ್‌ವೈ

02:11 AM Jan 26, 2019 | |

ಚಿಕ್ಕಬಳ್ಳಾಪುರ: ಒಬ್ಬ ಜವಾಬ್ದಾರಿ ಯುತ ಸಂಸದರಾಗಿ, ಮಾಜಿ ಕೇಂದ್ರ ಸಚಿವರಾಗಿ ಎಂ.ವೀರಪ್ಪ ಮೊಯ್ಲಿಗೆ ತಮ್ಮ ಕ್ಷೇತ್ರ ನೋಡಿಕೊಳ್ಳಲು ಆಗುತ್ತಿಲ್ಲ. ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಎಂದಾದರೂ ಪ್ರಧಾನಿ ಅಥವಾ ಕೇಂದ್ರ ಸರ್ಕಾರದ ಗಮನಕ್ಕೆ ತಂದಿ ದ್ದಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಚಿಕ್ಕಬಳ್ಳಾಪುರ ಸಂಸದ ಎಂ.ವೀರಪ್ಪ ಮೊಯ್ಲಿ ವಿರುದ್ದ ಕಿಡಿಕಾರಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತ ನಾಡಿದ ಅವರು, ಜಿಲ್ಲೆ ಬರದಿಂದ ತತ್ತರಿಸುತ್ತಿದೆ. ಆದರೆ, ಸಂಸದರಾಗಿ ರುವ ವೀರಪ್ಪ ಮೊಯ್ಲಿ ಎಷ್ಟು ಬಾರಿ ರೈತರ ಹೊಲ ಗದ್ದೆಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿದ್ದಾರೆ ಎಂದು ಪ್ರಶ್ನಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next