Advertisement

ಕುಡಿವ ನೀರಿನ ಸೌಲಭ್ಯ ಕಲ್ಪಿಸಿ

06:35 PM May 18, 2020 | Naveen |

ಮೊಳಕಾಲ್ಮೂರು: ತಾಲೂಕಿನ ರಾಂಪುರ ಗ್ರಾಮದ ಜನತೆಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್‌ ಎಂ. ಬಸವರಾಜ್‌ ಅವರಿಗೆ ಗ್ರಾಮದ ಮಹಿಳೆಯರು ಮನವಿ ಸಲ್ಲಿಸಿದರು.

Advertisement

ರಾಂಪುರದ 6ನೇ ವಾರ್ಡ್‌, ಇತರ ವಾರ್ಡ್‌ಗಳಲ್ಲಿ ಬಹುತೇಕರಿಗೆ ಕುಡಿಯುವ ನೀರಿನ ಅಭಾವ ಕಂಡು ಬಂದಿದೆ. ಈ ಭಾಗದ ಜನರು ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಇಲ್ಲಿದ್ದ ನೀರಿನ ಟ್ಯಾಂಕ್‌ ಅನ್ನು ದೂರದ ಸ್ಥಳಕ್ಕೆ ಸ್ಥಳಾಂತರ ಮಾಡಿರುವುದರಿಂದ ನೀರನ್ನು ಪಡೆಯಲು ಕಷ್ಟವಾಗಿದೆ. ಗ್ರಾಪಂ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕೋವಿಡ್ ಭೀತಿಯಿಂದ ನೀರಿಗಾಗಿ ದೂರದ ಪ್ರದೇಶಗಳಿಗೆ ಹೋಗದಂತಹ ದುಸ್ಥಿತಿ ನಿರ್ಮಾಣವಾಗಿರುವುದರಿಂದ ಕೂಡಲೇ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next