Advertisement

ಕಾಂಗ್ರೆಸ್‌ ಬಲವರ್ಧನೆಗೆ ಶ್ರಮ: ತಿಪ್ಪೇಸ್ವಾಮಿ

11:32 AM Jun 06, 2020 | Naveen |

ಮೊಳಕಾಲ್ಮೂರು: ತಾಲೂಕಿನಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಕ್ಷ ಸಂಘಟಿಸಿ ಬಲವರ್ಧನೆಗೊಳಿಸಲು ಶ್ರಮಿಸಲಾಗುವುದೆಂದು ಮಾಜಿ ಶಾಸಕ ಎಸ್‌.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

Advertisement

ತಾಲೂಕಿನ ಹಾನಗಲ್‌ ಗ್ರಾಮದ ಪ್ರವಾಸಿ ಮಂದಿರದ ಆವರಣದಲ್ಲಿ ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ರವರ ಪದಗ್ರಹಣ ಕಾರ್ಯಕ್ರಮವನ್ನು ಗ್ರಾಮೀಣ ಭಾಗದ ಜನತೆಗೆ ವೀಕ್ಷಿಸಲು ಎಲ್‌ಇಡಿ ಟಿವಿಗಳನ್ನು ಅಳವಡಿಸಲು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್‌ ರವರು ತಮ್ಮ ರಾಜಕೀಯ ಚಾಣಾಕ್ಷತನವನ್ನು ಜನರ ಮುಂದಿಟ್ಟಿದ್ದಾರೆ. ಕಾಂಗ್ರೇಸ್‌ ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ರವರು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ತಕ್ಷಣವೇ ಇಡೀ ರಾಜ್ಯದಲ್ಲಿ ಕಾಂಗ್ರೆಸ್‌ ಬವರ್ಧನೆಗೆ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ರಾಜ್ಯದಲ್ಲಿ ಆಡಳಿತ ಬಿಜೆಪಿ ಧೋರಣೆ ಖಂಡಿಸಲು ಮತ್ತು ಅವರ ಕಾರ್ಯ ವೈಖರಿ ಪ್ರಶ್ನಿಸಲು ಸಿದ್ಧರಾಗಬೇಕಾಗಿದೆ ಎಂದರು.

ಜಿ.ಪಂ. ಸದಸ್ಯ ಡಾ.ಯೋಗೇಶ್‌ ಬಾಬು , ತಾಲೂಕು ಉಸ್ತುವಾರಿ ಬಿ.ಎಂ.ಪಾಟೀಲ್‌, ಪಿ.ಮೋಹನ್‌ ಬಾಬು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಟೇಲ್‌ ಜಿ ಪಾಪನಾಯಕ, ತಳುಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್‌ ರೆಡ್ಡಿ, ಜಿ.ಪಂ ಮಾಜಿ ಅಧ್ಯಕ್ಷ ಬಾಲರಾಜ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ದಾದಾಪೀರ್‌, ಜಗದೀಶ್‌, ಟಿ.ಎಸ್‌.ಪಾಲಯ್ಯ, ತಿಪ್ಪೇಸ್ವಾಮಿ ಮುದ್ದಪ್ಪ ಹಾಗೂ ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next