Advertisement

ಕೋವಿಡ್ ಪ್ರಕರಣ ಪತ್ತೆ: ಅಂಗಡಿ ಮುಂಗಟ್ಟು ಬಂದ್‌

01:17 PM Jul 02, 2020 | Naveen |

ಮೊಳಕಾಲ್ಮೂರು: ತಾಲೂಕಿನಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಒಂದು ಗಂಟೆವರೆಗೆ ಲಾಕ್‌ಡೌನ್‌ ಮಾಡಲಾಗಿತ್ತು. ಇದರಿಂದ ಪಟ್ಟಣ ಹಾಗೂ ನಾನಾ ಗ್ರಾಮಗಳು ಬಣಗುಟ್ಟುತ್ತಿದ್ದವು.

Advertisement

ಪಟ್ಟಣದಲ್ಲಿ ವಾರದ ಸಂತೆ ದಿನವಾಗಿದ್ದರಿಂದ ವಾರದ ಸಂತೆಗೆ ಅನುಮತಿ ನೀಡಲಾಗಿರಲಿಲ್ಲ. ಇದರಿಂದ ನಾಗರಿಕರು ಪರದಾಡುವಂತಾಗಿತ್ತು. ಲಾಕ್‌ ಡೌನ್‌ ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸರು ಜನರಲ್ಲಿ ಅರಿವು ಮೂಡಿಸಿದರು. ಬೆಳಿಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಿದವು. ನಿಗದಿ ಪಡಿಸಿದ ಸಮಯಕ್ಕೆ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಲಾಗಿತ್ತು. ಆಟೋಗಳು, ದ್ವಿಚಕ್ರ ವಾಹನಗಳ ಸಂಚಾರಕ್ಕೂ ಕಡಿವಾಣ ಹಾಕಲಾಗಿತ್ತು. ಆದರೆ ಸರ್ಕಾರಿ ಕಚೇರಿಗಳು ತೆರೆದು ಸಾರ್ವಜನಿಕರ ಸೇವೆಗೆ ಅವಕಾಶ ಕಲ್ಪಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next