Advertisement

ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ

04:14 PM Jun 03, 2020 | Naveen |

ಮೊಳಕಾಲ್ಮೂರು: ನೆರೆಯ ಮಹಾರಾಷ್ಟ್ರದಿಂದ ಬರುವ ವ್ಯಕ್ತಿಗಳನ್ನು ಮಾತ್ರ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ ಅಲ್ಲಿಡಲಾಗುವುದು ಎಂದು ತಹಶೀಲ್ದಾರ್‌ ಎಂ.ಬಸವರಾಜ್‌ ತಿಳಿಸಿದರು.

Advertisement

ಪಟ್ಟಣದ ತಾಪಂ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಕೋವಿಡ್‌-19 ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು. ಮಹಾರಾಷ್ಟ್ರ ರಾಜ್ಯವನ್ನು ಹೊರತುಪಡಿಸಿ ಉಳಿದ ರಾಜ್ಯಗಳು ಹಾಗೂ ಅಂತರ್‌ ಜಿಲ್ಲೆಗಳಿಂದ ಬರುವವರನ್ನು 14 ದಿನಗಳವರೆಗೆ ಹೋಂ ಕ್ವಾರಂಟೈನ್‌ ನಲ್ಲಿಡಬೇಕಾಗುತ್ತಿದೆ. ಹೋಂ ಕ್ವಾರಂಟೈನ್‌ನಲ್ಲಿ ಇರುವವರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕಾಗಿದೆ. ತಾಲೂಕು ಆರೋಗ್ಯಅಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿ ಅಗತ್ಯ ಕ್ರಮ ಕೈಗೊಂಡು ಕೊರೊನಾ ಮುಕ್ತ ತಾಲೂಕನ್ನಾಗಿಸಲು ಸಹಕಾರದಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.

ತಾಲೂಕು ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಚಿದಾನಂದಪ್ಪ ಮಾತನಾಡಿದರು. ಅಧಿಕಾರಿಗಳಾದ ಸವಿತಾ, ಪ್ರೇಮ್‌ ನಾಥ್‌, ವೈ. ತಿಪ್ಪೇಶ್‌, ನಂದೀಶ್‌, ರೆಹಮಾನ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next