Advertisement

ಕೋವಿಡ್ ಮುಕ್ತ ತಾಲೂಕಾಗಿಸಿ

01:18 PM Jun 19, 2020 | Naveen |

ಮೊಳಕಾಲ್ಮೂರು: ತಾಲೂಕಿನ ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್ ಮುಕ್ತ ತಾಲೂಕನ್ನಾಗಿಸಬೇಕೆಂದು ತಹಶೀಲ್ದಾರ್‌ ಎಂ.ಬಸವರಾಜ್‌ ಹೇಳಿದರು.

Advertisement

ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಆವರಣದಲ್ಲಿ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಪಟ್ಟಣ ಪಂಚಾಯತ್‌ ಸಹಯೋಗದೊಂದಿಗೆ ಆಯೋಜಿಸಿದ್ದ ಮಾಸ್ಕ್ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಂಧ್ರಪ್ರದೇಶ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ನ ಪಾಸಿಟಿವ್‌ ಪ್ರಕರಣಗಳು ಕಂಡು ಬಂದಿರುವುದರಿಂದ ಜಾಗೃತರಾಗಿರಬೇಕು ಎಂದರು. ಕೋವಿಡ್‌ ತಾಲೂಕು ನೋಡಲ್‌ ಅಧಿಕಾರಿ ಡಿ. ಚಿದಾನಂದಪ್ಪ ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಪಿಎಸ್‌ಐ ಎಂ.ಕೆ. ಬಸವರಾಜ್‌ ಮತ್ತು ಸಿಡಿಪಿಒ ಸವಿತಾ ಮಾತನಾಡಿದರು. ಪಪಂ ಮುಖ್ಯಾಧಿಕಾರಿ ಕಾಂತರಾಜ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next