Advertisement

ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯ

05:22 PM Apr 25, 2020 | Naveen |

ಮೊಳಕಾಲ್ಮೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಳ್ಳಾರಿ ಜಿಲ್ಲಾ ಸಂಘಟನಾ ಸಂಚಾಲಕ ಶಿವಣ್ಣ ಸಾಲಿಮನಿ ಅವರನ್ನು ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಎಂ. ಬಸವರಾಜ್‌ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ದಸಂಸ ತಾಲೂಕು ಸಂಚಾಲಕ ಕೊಂಡಾಪುರ ಪರಮೇಶ್ವರಪ್ಪ ಮಾತನಾಡಿ, ಕೂಡ್ಲಿಗಿಯ ಶಿವಣ್ಣ ಸಾಲಿ ಮನಿಯವರು ದಲಿತ ಸಮುದಾಯಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಪ್ರಭಾವಿ ದಲಿತ ನಾಯಕರಾಗಿ ಹೊಮ್ಮಿದ್ದರು. ಅವರ ಹೋರಾಟ ಮತ್ತು ಪ್ರಗತಿಯನ್ನು ಸಹಿಸಲಾರದ ದುಷ್ಕರ್ಮಿಗಳು ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ. ಶಿವಣ್ಣ ಸಾಲಿಮನಿ ಅವರನ್ನು ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು. ಅವರ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್‌ ಎಂ. ಬಸವರಾಜ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಜಿ.ವೈ. ದುರುಗಪ್ಪ, ಹುಲುಗಪ್ಪ, ಎಂ.ಎ. ತಿಪ್ಪೇಸ್ವಾಮಿ, ಪಾಲಯ್ಯ, ಜಿ. ರವಿ, ಚಂದ್ರಶೇಖರ ಮತ್ತಿತರರು ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next