Advertisement

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

05:35 PM Mar 29, 2023 | Team Udayavani |

ನವದೆಹಲಿ: ದ್ವೇಷದ ಭಾಷಣಗಳನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು ಮತ್ತು ರಾಜಕೀಯ ಮತ್ತು ಧರ್ಮಗಳನ್ನು ಬೇರ್ಪಡಿಸಿದ ಕ್ಷಣ, ರಾಜಕಾರಣಿಗಳು ರಾಜಕೀಯದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಿದ ಕ್ಷಣದಲ್ಲಿ ಅಂತಹ ಭಾಷಣಗಳು ದೂರವಾಗುತ್ತವೆ ಎಂದು ಬುಧವಾರ ಹೇಳಿದೆ.

Advertisement

ಕೋಮು ವಿಚಾರವುಳ್ಳವರಿಂದ ಕೆಲ ದ್ವೇಷದ ಭಾಷಣಗಳನ್ನು ಮಾಡಲಾಗುತ್ತಿದೆ, ಜನರು ತಮ್ಮನ್ನು ತಾವು ನಿಗ್ರಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠ, ದೂರದ ಪ್ರದೇಶಗಳು ಮತ್ತು ಮೂಲೆ ಮೂಲೆಗಳಿಂದ ಜನರು ಅವುಗಳನ್ನು ಕೇಳಲು ಸೇರುತ್ತಿದ್ದರು ಎಂದು ಹೇಳಿದರು.

”ಎಷ್ಟು ಜನರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಪ್ರಾರಂಭಿಸಬಹುದು” ಎಂದು ಆಶ್ಚರ್ಯ ವ್ಯಕ್ತಪಡಿಸಿದ ಪೀಠ, ”ಇತರ ನಾಗರಿಕರು ಅಥವಾ ಸಮುದಾಯಗಳನ್ನು ನಿಂದಿಸುವುದಿಲ್ಲ ಎಂದು ಭಾರತದ ಜನರು ಏಕೆ ಪ್ರತಿಜ್ಞೆ ತೆಗೆದುಕೊಳ್ಳಬಾರದು” ಎಂದು ಹೇಳಿದೆ.

ದ್ವೇಷದ ಭಾಷಣಗಳನ್ನು ಮಾಡುವವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲು ವಿಫಲವಾದ ವಿವಿಧ ರಾಜ್ಯಗಳ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಪೀಠ ಹೇಳಿದೆ.

Advertisement

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಿರ್ದಿಷ್ಟ ಸಮುದಾಯದ ವಿರುದ್ಧ ಕೇರಳದಲ್ಲಿ ಮಾಡಿದ ಅವಹೇಳನಕಾರಿ ಭಾಷಣವನ್ನು ಎತ್ತಿ ತೋರಿಸಿ, ಅರ್ಜಿದಾರರಾದ ಶಾಹೀನ್ ಅಬ್ದುಲ್ಲಾ ಅವರು ದೇಶದಲ್ಲಿ ದ್ವೇಷದ ಭಾಷಣಗಳ ಘಟನೆಗಳನ್ನು ಆಯ್ದು ತೋರಿಸಿದ್ದಾರೆ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next