Advertisement

ಸೋಮವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

07:11 AM Sep 12, 2022 | Team Udayavani |

ಮೇಷ: ದೇವತಾನುಗ್ರಹದಿಂದ ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ. ಗುರುಹಿರಿಯರಿಂದ ಪ್ರೋತ್ಸಾಹ. ಅವಿವಾಹಿತರಿಗೆ ವಿವಾಹ ಯೋಗ.

Advertisement

ವೃಷಭ: ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ. ದಂಪತಿಗಳಲ್ಲಿ ಸಹಕಾರದಿಂದ ಕೈಗೊಂಡ ಕಾರ್ಯದಲ್ಲಿ ಪ್ರಗತಿ.

ಮಿಥುನ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಗುರು ಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ. ನಿರಂತರ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚತುರತೆಯಿಂದ ಪ್ರಗತಿ. ದಾಂಪತ್ಯ ಸುಖ ತೃಪ್ತಿದಾಯಕ. ಮಕ್ಕಳಿಂದ ಸಂತೋಷ. ದೂರ ಪ್ರಯಾಣ ಸಂಭವ.

ಕರ್ಕ: ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರು ಹಿರಿಯರೊಂದಿಗೆ ಸಂಭ್ರಮದ ಕಾಲ ಕಳೆಯುವಿಕೆ.

ಸಿಂಹ: ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರದಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆಯ ನಡೆಯಿಂದ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹ. ಗುರುಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಅನುಕೂಲ.

Advertisement

ಕನ್ಯಾ: ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ.

ತುಲಾ: ಸ್ತ್ರೀಪುರುಷರಿಗೆ ಪರಸ್ಪರರಿಂದ ಸಹಾಯ ಲಾಭ. ಉತ್ತಮ ಗೌರವದಿಂದ ಕೂಡಿದ ಧನಾರ್ಜನೆ. ಜ್ಞಾನಕ್ಕೆ ಮನ್ನಣೆ. ಸಹೋದರರಿಗೆ ಅಭಿವೃದ್ಧಿ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಪ್ರಯಾಣ ಯೋಗ. ದೇವತಾಕಾರ್ಯಗಳಲ್ಲಿ ಗೊಂದಲವಿದ್ದರೂ ಸಫ‌ಲತೆ ಸಾಧಿಸಿದ ತೃಪ್ತಿ.

ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ. ನಿರೀಕ್ಷಿತ ಸ್ಥಾನ ಸುಖ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಗೃಹೋಪಯೋಗಿ ವಸ್ತು ಸಂಗ್ರಹ. ದಾಂಪತ್ಯದಲ್ಲಿ ತೃಪ್ತಿ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯ. ಆರೋಗ್ಯದ ಬಗ್ಗೆ ಗಮನವಿರಲಿ.

ಧನು: ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯದಲ್ಲಿ ಏರಿಳಿತದ ಸ್ಥಿತಿ. ಕಾರ್ಮಿಕ ವರ್ಗದವರಿಂದಲೂ ಸಹೋದರಾದಿ ವರ್ಗದವರಿಂದಲೂ ಸುಖ. ಪ್ರಯಾಣ, ದೇವತಾ ಕಾರ್ಯಗಳಲ್ಲಿ ಅಡಚಣೆ ವಿಳಂಬ.ಸಾಂಸಾರಿಕ ಸುಖ ಉತ್ತಮ .

ಮಕರ: ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ. ಆಹಾರೋದ್ಯಮದವರಿಗೆ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಪ್ರಯಾಣ ಯೋಗ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.

ಕುಂಭ: ಮಕ್ಕಳ ವಿಚಾರದಲ್ಲಿ ಸಂತೋಷ. ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ‌ ಪ್ರಯಾಣ ಸುಖ. ದಂಪತಿಗಳಿಗೆ ಉತ್ತಮ ಶುಭಫ‌ಲ. ಉದ್ಯೋಗ ವಿಚಾರದಲ್ಲಿ ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿ ವಹಿಸುವುದರಿಂದ ಅನುಕೂಲ.

ಮೀನ: ದೂರ ಪ್ರಯಾಣ. ಗೃಹೋಪ ವಸ್ತು ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರುಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯದಿಂದ ಸಮಾದಾನ ತೃಪ್ತಿ. ಆರೋಗ್ಯ ಗಮನಿಸಿ.

Advertisement

Udayavani is now on Telegram. Click here to join our channel and stay updated with the latest news.

Next