Advertisement

ಸೋಮವಾರದ ರಾಶಿ ಫಲ : ಈ ರಾಶಿಯವರು ಅನ್ಯರಿಂದ ಸಹಾಯ ನಿರೀಕ್ಷಿಸದಿರಿ…

07:17 AM Oct 03, 2022 | Team Udayavani |

ಮೇಷ: ಸುದೃಢ ಆರೋಗ್ಯ. ನಿರೀಕ್ಷಿತ ಸ್ಥಾನಮಾನ ಗೌರವಾದಿಗಳ ಪ್ರಾಪ್ತಿ. ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ. ದೂರದ ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ .ದಾಂಪತ್ಯ ಸುಖ ವೃದ್ಧಿ.

Advertisement

ವೃಷಭ: ಉತ್ತಮ ಜನಮನ್ನಣೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಯೋಜನೆ ಬದ್ಧವಾದ ಕೆಲಸ ಕಾರ್ಯಗಳು ನಡೆದು ಸುಖ ಸಂತೋಷ ವೃದ್ಧಿ. ಮಕ್ಕಳಿಂದ ಸುವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಮಿಥುನ: ಜವಾಬ್ದಾರಿಯುತ ನಡವಳಿಕೆಯಿಂದ ಕೆಲಸ ಕಾರ್ಯಗಳಲ್ಲಿ ಜನಪ್ರಿಯತೆ ಗೌರವ ಆದರ ಪ್ರಾಪ್ತಿ ಕೀರ್ತಿ ಸಂಪಾದನೆ. ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿದಾಯಕ ದಿನ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ ಸಹಕಾರ.

ಕರ್ಕ: ಮಕ್ಕಳ ಬಗ್ಗೆ ಹೆಚ್ಚಿದ ನೆಮ್ಮದಿ, ಆಲೋಚನೆ ಹಾಗೂ ಸಂತೋಷ. ಅಧ್ಯಯನದಲ್ಲಿ ಹೆಚ್ಚಿದ ಆಸಕ್ತಿ. ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಗೃಹದಲ್ಲಿ ಸಂತೋಷದ ವಾತಾವರಣ. ದಾಂಪತ್ಯ ತೃಪ್ತಿಕರ. ಧಾರ್ಮಿಕ ಕಾರ್ಯಗಳಲ್ಲಿ ಏಕಾಗ್ರತೆಗೆ ಆದ್ಯತೆ.

ಸಿಂಹ: ಆರೋಗ್ಯ ಗಮನಿಸಿ. ವ್ಯವಹಾರದಲ್ಲಿ ಜಾಗೃತೆ ವಹಿಸುವುದರಿಂದ ಸ್ಥಾನಮಾನ ಪ್ರಾಪ್ತಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಅನಗತ್ಯ ಚರ್ಚೆಗೆ ಆಸ್ಪದ ನೀಡಬೇಡಿ. ಹಣಕಾಸಿನ ವಿಚಾರದಲ್ಲಿ ಜಾಗೃತೆ ವಹಿಸಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ, ಅಡಚಣೆ ತೋರೀತು.

Advertisement

ಕನ್ಯಾ: ಉತ್ತಮ ಜನರ ಒಡನಾಟ. ವ್ಯವಹಾರಗಳಲ್ಲಿ ಪ್ರಗತಿ. ದೂರ ಪ್ರಯಾಣ. ದಂಪತಿಗಳಲ್ಲಿ ಹೆಚ್ಚಿದ ಸಹಕಾರ. ಗೃಹೋಪಕರಣ ವಸ್ತುಗಳ ಖರೀದಿ. ಅನಿರೀಕ್ಷಿತ ಮಿತ್ರರ ಆಗಮನ. ಮನೆಯಲ್ಲಿ ಸಂತಸದ ವಾತಾವರಣ.

ತುಲಾ: ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದಲೂ, ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ.

ವೃಶ್ಚಿಕ: ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆಗೆ ಆಸ್ಪದ ನೀಡದಿರಿ.

ಧನು: ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ ಧನ ಲಾಭ. ಉತ್ತಮ ವಾಕ್‌ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ. ಮಕ್ಕಳ ಸುಖ ಸಂತೋಷ ವೃದ್ಧಿ.

ಕುಂಭ: ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿ ಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನ ವ್ಯಯ.

ಮೀನ: ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ.

Advertisement

Udayavani is now on Telegram. Click here to join our channel and stay updated with the latest news.

Next