Advertisement

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:44 AM Oct 25, 2021 | Team Udayavani |

ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿº ಪರರಿಂದ ಸಂದರ್ಭಕೆ R ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ಚತುರತೆ. ಗುರುಹಿರಿಯರಿಂದ ಸಂತೋಷ.

Advertisement

ವೃಷಭ: ದೂರದ ಮಿತ್ರರ ಭೇಟಿ. ಹೊಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.

ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವತ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖವೃದ್ಧಿ.ಮಕ್ಕಳ ನಿಮಿತ್ತ ಶ್ರಮ.

ಕರ್ಕ: ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮುನಃ ಸಂತೋಷ. ಉದ್ಯೋಗ ವ್ಯವಹಾರಗಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫ‌ಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.

ಸಿಂಹ: ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾದುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ.ಗೌರವಪ್ರಾಪ್ತಿ.ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ. ದಾಂಪತ್ಯ ಸುಖ ವೃದ್ಧಿ.

Advertisement

ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ, ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.

ತುಲಾ: ಅನಿರೀಕ್ಷಿತ ಧನಾಗಮನ. ಉತ್ತಮ ವಾಕ್‌ಚತುರತೆ. ಕೌಟುಂಬಿಕ ಸುಖ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ.

ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರು ಹಿರಿಯರ ಮೇಲಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದಾಂಪತ್ಯ ಸುಖ ಅಭಿವೃದ್ಧಿ.

ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾಧಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಮಕರ: ಪರದೇಶ ಮೂಲದಿಂದ ಧನಾಗಮ. ಪಾಲುಪಾರರಿಂದ ಸಹಾಯ ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಸಾಂಸಾರಿಕ ಸುಖದಲ್ಲಿ ಅಭಿವೃದ್ಧಿ.

ಕುಂಭ: ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ದಂಪತಿಗಳು, ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ ಪರದೇಶ ಸ್ಥಿತ ಮಿತ್ರರಿಂದ ಸಹಾಯ ಒದಗಿ ಬರುವುದು. ಪ್ರಯಾಣದಿಂದ ಅನುಕೂಲ.

ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ.ಸಾಹಸದಿಂದಧನಾರ್ಜನೆವೃದ್ಧಿ.ದೂರಪ್ರಯಾಣದಿಂದ ಕಾರ್ಯ ಸಫ‌ಲತೆ.ಕಾರ್ಮಿಕರು ಸÖೂàದ ೆ ರರಲ್ಲಿ ತಾಳ್ಮೆಯಿಂದಿರಿ.

Advertisement

Udayavani is now on Telegram. Click here to join our channel and stay updated with the latest news.

Next