Advertisement

ಹುಣಸೂರು: ಬಿಸಿಯೂಟದ ಹಣ ದುರುಪಯೋಗ; ಮುಖ್ಯ ಶಿಕ್ಷಕಿ ಅಮಾನತು

08:30 PM Jun 03, 2022 | Team Udayavani |

ಹುಣಸೂರು : ತಾಲೂಕಿನ ಹನಗೋಡು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಸಹ ಶಿಕ್ಷಕಿ ಎಸ್.ಅಂಜಲಿ ಮಾರೀಸ್‌ರನ್ನು ಅಕ್ಷರ ದಾಸೋಹ ಯೋಜನೆಯ 4.42ಲಕ್ಷರೂ ಹಣ ದುರುಪಯೋಗದ ಹಿನ್ನೆಲೆಯಲ್ಲಿ ಡಿಡಿಪಿಐ ರಾಮಚಂದ್ರರಾಜೇ ಅರಸ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Advertisement

ಎಸ್.ಅಂಜಲಿ ಮಾರಿಸ್‌ರವರು ಈ ಹಿಂದೆ ಹನಗೋಡು ಶಾಲೆಯಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾಗಿದ್ದ ವೇಳೆ ಮಕ್ಕಳ ಅಕ್ಷರ ದಾಸೋಹ-ಬಿಸಿಯೂಟ ಯೋಜನೆಯಡಿ ಹಂತ-ಹಂತವಾಗಿ 4,42,483 ರೂಗಳು ದುರುಪಯೋಗಪಡಿಸಿಕೊಂಡಿರುವುದು ಅಕ್ಷರ ದಾಸೋಹದ ಶಿಕ್ಷಣಾಧಿಕಾರಿಗಳ ತನಿಖೆಯಿಂದ ಬೆಳಕಿಗೆ ಬಂದಿದ್ದು, ಅವರ ವರದಿ ಆದಾರದ ಮೇಲೆ ಶಿಕ್ಷಣ ಇಲಾಖೆ ಕಾರಣ ಕೇಳಿ ನೀಡಿದ್ದ ನೋಟಿಸ್‌ಗೆ ಶಿಕ್ಷಕಿ ಅಂಜಲಿ ಮಾರಿಸ್‌ರವರು ದುರುಪಯೋಗಪಡಿಸಿಕೊಂಡಿರುವ ಹಣವನ್ನು ಶಾಲೆಯ ಅಕ್ಷರ ದಾಸೋಹ ಖಾತೆಗೆ ಹಣವನ್ನು ಜಮೆ ಮಾಡಲು ಒಪ್ಪಿ ತಪ್ಪೊಪ್ಪಿಗೆ ಪತ್ರವನ್ನು ಸಲ್ಲಿಸಿರುವ ಪರಿಣಾಮ ನಿಮ್ಮ ಮೇಲಿನ ಆರೋಪ ಸಾಬೀತಾಗಿರುತ್ತದೆ. ಇದರಿಂದಾಗಿ ನೀವು ಪ್ರಭಾರವಹಿಸಿಕೊಂಡಿದ್ದ ಅವಧಿಯ ಶಾಲೆಯಲ್ಲಿನ ಅವ್ಯವಹಾರಗಳ ಬಗ್ಗೆ ವಿಚಾರಣೆ ನಡೆಸಲು ತೀರ್ಮಾನಿಸಿ, ಶಿಸ್ತು ಕ್ರಮವಹಿಸಲು ತೀರ್ಮಾನಿಸಿದೆ, ನಿಮ್ಮ ವರ್ತನೆಯಿಂದಾಗಿ ಸಾರ್ವಜನಿಕರು ಇಲಾಖೆಯನ್ನು ಹಾಗೂ ಶಿಕ್ಷಕರನ್ನು ಅನುಮಾನದಿಂದ ನೋಡುವಂತಾಗಿದ್ದು, ಬಿಸಿಯೂಟದ ಹಣ ದುರುಪಯೋಗವನ್ನು ಗಂಭೀರವಾಗಿ ಪರಿಗಣಿಸಿ, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ ಎಂದು ಡಿಡಿಪಿಐ ಪತ್ರಿಕೆಗೆ ತಿಳಿಸಿದ್ದಾರೆ.

ಹುದ್ದೆ ಬದಲಾವಣೆಯಿಂದ ಅವ್ಯವಹಾರ ಬಯಲು

ವರ್ಷದ ಹಿಂದಷ್ಟೆ ಕಾಯಂ ಮುಖ್ಯ ಶಿಕ್ಷಕಿಯಾಗಿ ಪ್ರಭಾಮಣಿ ಅಧಿಕಾರವಹಿಸಿಕೊಂಡಿದ್ದರು. ಅಕ್ಷರ ದಾಸೋಹ ಯೋಜನೆಯ ಖಾತೆಯಲ್ಲಿ ಹಣ ಬಹಳ ಕಡಿಮೆಯಿರುವುದನ್ನು ಕಂಡು, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ಧೇಶಕರಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದರು. ಎಲ್ಲಾ ಪ್ರೌಢಶಾಲೆಯ ಖಾತೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಹಣವಿತ್ತು. ಇಲ್ಲಿ ಹಣವಿಲ್ಲದ ಬಗ್ಗೆ ಅನುಮಾನಗೊಂಡು ಜಿಲ್ಲಾ ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಲಿಂಗರಾಜಯ್ಯನವರೇ ಶಾಲೆಗೆ ಬಂದು ತಪಾಸಣೆ ನಡೆಸಿದ ವೇಳೆ ಹಣ ದುರುಪಯೋಗದ ಪ್ರಕರಣ ಬಯಲಿಗೆ ಬಂತು.

ಮಕ್ಕಳ ಹಣವು ದುರುಪಯೋಗ

Advertisement

ಅಂಜಲಿ ಮಾರೀಸ್‌ರವರು ಪ್ರಭಾರಿ ಮುಖ್ಯ ಶಿಕ್ಷಕಿಯಾಗಿದ್ದ ವೇಳೆ ಬಿಸಿಯೂಟ ಹಣ ದುರುಪಯೋಗದ ಜೊತೆಗೆ ಪಿಠೋಪಕರಣಗಳಿಗಾಗಿ ಶಾಲಾ ಮಕ್ಕಳಿಂದ ವಸೂಲಿ ಮಾಡಿದ್ದ ೪೮ ಸಾವಿರ ರೂಗಳನ್ನು ಶಾಲಾ ಖಾತೆಗೆ ಜಮೆ ಮಾಡದೆ, ಪೀಠೋಪಕರಣವನ್ನು ಮಾಡಿಸದೆ ತಮ್ಮ ಬಳಿಯೇ ಹಣವಿಟ್ಟುಕೊಂಡು ದುರುಪಯೋಗಪಡಿಸಿಕೊಂಡ ಪಡಿಸಿಕೊಂಡಿದ್ದು ಸಹ ತನಿಖೆ ವೇಳೆ ಪೋಷಕರು ಅಧಿಕಾರಿಗಳಿಗೆ ದೂರಿದ್ದರು. ಮಾರನೇ ದಿನವೇ ಈ ಹಣವನ್ನು ಖಾತೆಗೆ ಜಮೆ ಮಾಡಿದ್ದರಾದರೂ ಅಕ್ಷರದಾಸೋಹದ ಹಣ ಮಾತ್ರ ಪಾವತಿಸಿರಲಿಲ್ಲ. ತನಿಖೆ ವೇಳೆ ಸಮರ್ಪಕ ಉತ್ತರ ನೀಡಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next