Advertisement

ಬೇನಾಮಿ ಹಣ ಪತ್ತೆ: ಡಿಕೆಶಿ ಅರ್ಜಿ ವಜಾ

11:20 PM Nov 12, 2019 | Lakshmi GovindaRaju |

ಬೆಂಗಳೂರು: ಐಟಿ ದಾಳಿ ವೇಳೆ ದೆಹಲಿಯ ನಿವಾಸಿಗಳಲ್ಲಿ ಸಿಕ್ಕ 8.60 ಕೋಟಿ ರೂ. ಬೇನಾಮಿ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ದಾಖಲಿಸಿರುವ ಪ್ರಕರಣದ ಆರೋಪಗಳಿಂದ ತಮ್ಮನ್ನು ಕೈಬಿಡಬೇಕು ಎಂದು ಕೋರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

Advertisement

ಈ ಕುರಿತಂತೆ ಡಿ.ಕೆ.ಶಿವಕುಮಾರ್‌ ಹಾಗೂ ಮತ್ತವರ ಆಪ್ತರು ಸಲ್ಲಿಸಿದ್ದ ಪುನರ್‌ ಪರಿಶೀಲನಾ ಅರ್ಜಿಯನ್ನು ಬಿ.ಎ. ಪಾಟೀಲ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಜಾಗೊಳಿಸಿತು. ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ದಾಖಲಿಸಿರುವ ದೂರು ಐಟಿ ಕಾಯ್ದೆ ಮತ್ತು ಐಪಿಸಿ ಕಲಂ 120-ಬಿ (ಅಪರಾಧಿಕ ಒಳಸಂಚು) ಪ್ರಕಾರ ಸೂಕ್ತವಾಗಿದೆ. ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಆದೇಶ ಸರಿಯಾಗಿದೆ. ಹಾಗಾಗಿ, ಆರೋಪಿಗಳ ವಿರುದ್ಧದ ಪ್ರಕರಣದ ವಿಚಾರಣೆ ನಡೆಯಬೇಕಿದೆ ಎಂದು ನ್ಯಾಯಪೀಠ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next