Advertisement

ಹಣ ವರ್ಗಾವಣೆ: 3 ಅಧಿಕಾರಿಗಳ ಅಮಾನತು

06:20 AM Nov 03, 2017 | Team Udayavani |

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಐಡಿಎಲ್‌)ದ  55 ಕೋಟಿ ರೂ. ಠೇವಣಿಯ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ರಾಜ್ಯ ಸರಕಾರ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದು, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.

Advertisement

ಪ್ರಕರಣ ಸಂಬಂಧ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ ಮುಖ್ಯ ಹಣಕಾಸು ಅಧಿಕಾರಿ ಡಾ| ವೀರನ ಗೌಡ ಪಾಟೀಲ್‌, ಉಪ ಹಣಕಾಸು ಅಧಿಕಾರಿ ಪ್ರಶಾಂತ್‌ ಮಾಡಾಳ್‌, ಹಣಕಾಸು ಅಧೀಕ್ಷಕ ಶಂಕರಾಚಾರಿ ಅವ ರನ್ನು ಅಮಾನತುಗೊಳಿಸಿ ಆದೇಶ ಹೊರ ಡಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ, ಪ್ರಕರಣವನ್ನು ಸಿಐಡಿಗೆ ವಹಿಸಿದೆ.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ 55 ಕೋಟಿ ರೂ.ಗಳನ್ನು ಮಂಗಳೂರಿನ ಗೋಕುಲ ನಗರದ ನವನಿಧಿ ಕಾಂಪ್ಲೆಕ್ಸ್‌ನಲ್ಲಿರುವ ಕುಳಾಯಿ ಶಾಖೆಯ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕಿನಲ್ಲಿ ನಿಗದಿತ ಠೇವಣಿ ಇರಿಸಿರುವ ಹಣ ದುರುಪಯೋಗವಾಗಿರುವುದು ಮೇಲ್ನೋಟಕ್ಕೆ ನಿಜ ಎಂದು ಕಂಡು ಬಂದಿ ರುವ ಹಿನ್ನೆಲೆಯಲ್ಲಿ ಈ ಮೂರು ಮಂದಿ ಅಧಿಕಾರಿಗಳನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ.

ಕೆಆರ್‌ಐಡಿಎಲ್‌ನ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಆಂತರಿಕ ಆರ್ಥಿಕ ಸಲಹೆ ಗಾರರು ಕೈಗೊಂಡಿರುವ ಪ್ರಾಥಮಿಕ ತನಿಖೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ ಬೆಂಗಳೂರಿನ ಕೋರಮಂಗಲದ ವಿಜಯ ಬ್ಯಾಂಕ್‌ ಶಾಖೆ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ  ಈ ಪ್ರಕರಣ ಬೆಳಕಿಗೆ ಬಂದಿದ್ದ ರಿಂದ ಬೆಂಗಳೂರಿನಲ್ಲಿ ಸಂಬಂಧ ಪಟ್ಟ ಪೊಲೀಸ್‌ ಠಾಣೆಯಲ್ಲಿ ಇನ್ನೊಂದು ಕ್ರಿಮಿನಲ್‌ ದೂರು ದಾಖಲಿಸಲು ಇಲಾಖೆ ತೀರ್ಮಾ ನಿಸಿದೆ.  ಈಗಾಗಲೇ ಮಂಗಳೂರಿನ ಸುರತ್ಕಲ… ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ಸೂಕ್ತ ಕ್ರಮ ಜರಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಮಾಹಿತಿ ನೀಡಿದೆ.

ಉನ್ನತ ಸಮಿತಿ
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ವಿವಿಧ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಿರುವ ನಿಗದಿತ ಠೇವಣಿ ಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ಗ್ರಾಮೀಣಾಭಿವೃದ್ಧಿ- ಪಂಚಾಯತ್‌ರಾಜ್‌ ಇಲಾಖೆಯ ಪ್ರಧಾನಕಾರ್ಯದರ್ಶಿ ಡಾ| ನಾಗಾಂಬಿಕಾದೇವಿ ಅವರ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ರಚಿಸಲು ಆದೇಶಿ ಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next