Advertisement

ಮಂಗನ ಕಾಯಿಲೆಗೆ ವ್ಯಕ್ತಿ ಬಲಿ

01:37 AM Apr 04, 2019 | Sriram |

ತೀರ್ಥಹಳ್ಳಿ: ಮಂಗನ ಕಾಯಿಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪದ ತೋಟದಕೊಪ್ಪ ಗ್ರಾಮದ ಶ್ರೀನಿವಾಸ ನಾಯ್ಕ (63) ಮಣಿಪಾಲ್‌ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.

Advertisement

ಜ್ವರದಿಂದ ಬಳಲುತ್ತಿದ್ದ ಶ್ರೀನಿವಾಸ ಅವರನ್ನು ಮಾ.27ರಂದು ಪಟ್ಟಣದ ಜೆಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಮಂಗನ ಕಾಯಿಲೆ ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಾ.30ರಂದು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಕಾಯಿಲೆ ಉಲ್ಬಣಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇವರ ಪತ್ನಿ ಪ್ರೇಮ, ಸೊಸೆಯಂದಿರಾದ ಸೀತಾ, ಮಧುರಾ ಅವರೂ ಮಂಗನ ಕಾಯಿಲೆಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 6 ತಿಂಗಳಲ್ಲಿ ಮಂಡಗದ್ದೆ ಹೋಬಳಿಯಲ್ಲಿ ಮಂಗನ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 3ಕ್ಕೇರಿದೆ. ಈ ಹಿಂದೆ ತೋಟದ ಕೊಪ್ಪದ ಲಚ್ಚ ಪೂಜಾರಿ, ಗಂಟೆ ಜನಗಲ್‌ನ ರಾಜು ಪೂಜಾರಿ ಮೃತಪಟ್ಟಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next