Advertisement

Monsoon: ಜೂನ್‌ 4ಕ್ಕೆ ಕೇರಳಕ್ಕೆ ಮುಂಗಾರು ಆಗಮನ

09:44 AM May 27, 2023 | Team Udayavani |

ನವದೆಹಲಿ: ಈ ಬಾರಿಯ ಮುಂಗಾರು ಆಗಮನ ಸಾಮಾನ್ಯವಾಗಿರಲಿದ್ದು ಜೂನ್‌1ಕ್ಕೂ ಮುಂಚಿತವಾಗಿ ಮುಂಗಾರು ಆಗಮನ ಸಾಧ್ಯತೆ ಇಲ್ಲ. ಕೇರಳಕ್ಕೆ ಜೂನ್‌4ರಂದು ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ. ಅಲ್ಲದೇ, ಮುಂದಿನವಾರ ಅರಬ್ಬೀ ಸಮದ್ರದಲ್ಲಿ ಯಾವುದೇ ಚಂಡಮಾರುತದ ಸಂಭವನೀಯತೆಯೂ ವರದಿಯಾಗಿಲ್ಲ. ಈ ಹಿನ್ನೆಲೆ ಎಲ್ಲೆಡೆ ಮುಂಗಾರಿನ ಸಮಾನ ಹಂಚಿಕೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಹೀಗಾದಲ್ಲಿ ಕೃಷಿಯ ಮೇಲೆ ಹೆಚ್ಚಿನ ಪರಿಣಾಮವೇನು ಬೀರುವುದಿಲ್ಲವೆಂದು ಐಎಂಡಿ ಅಧಿಕಾರಿಗಳು ಹೇಳಿದ್ದಾರೆ. ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಲಿನ ಬೇಗೆಗೆ ಬ್ರೇಕ್‌ ನೀಡಿ, ಶುಕ್ರವಾರ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ಇನ್ನೂ ಕೆಲ ದಿನಗಳು ಮಳೆಯಾಗುವ ಹಿನ್ನೆಲೆ ಮೇ 30ರ ವರೆಗೆ ದೆಹಲಿಗೆ ಬಿಸಿಲ ಬೇಗೆಯಿಂದ ಬ್ರೇಕ್‌ ಸಿಗಲಿದೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next