Advertisement

Monsoon;ಮೇ 31ರಂದೇ ಕೇರಳಕ್ಕೆ ಪ್ರವೇಶ: ಹವಾಮಾನ ಇಲಾಖೆ

12:27 AM May 28, 2024 | Team Udayavani |

ಹೊಸದಿಲ್ಲಿ: ಈ ಬಾರಿಯೂ ದೇಶದಲ್ಲಿ ಸಾಮಾನ್ಯ ಮುಂಗಾರು ಮಳೆಯಾಗಲಿದೆ. ಮೇ 31ರಂದೇ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾ ನಿರ್ದೇಶಕ ಡಾ| ಮೃತ್ಯುಂಜಯ ಮಹೋಪಾತ್ರ ಹೇಳಿದ್ದಾರೆ.

Advertisement

ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, ವಲಯಗಳಲ್ಲಿ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಬಹುದು. ವಾಯವ್ಯದಲ್ಲಿ ಸಾಮಾನ್ಯ ಮಳೆಯಾದರೆ, ಮಧ್ಯಭಾರತ ಹಾಗೂ ದಕ್ಷಿಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗ ಬಹುದು ಎಂದು ಹೇಳಿದ್ದಾರೆ. ಉತ್ತರ ಭಾರತದಲ್ಲಿನ ಬಿಸಿಗಾಳಿಯ ವಾತಾವರಣ ಇನ್ನೂ 3-4 ದಿನಗಳಲ್ಲಿ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ ರಾಜಸ್ಥಾನದ ಫ‌ಲೋಡಿ ಯಲ್ಲಿ ಗರಿಷ್ಠ 49.4 ಡಿಗ್ರಿ ಸೆ. ತಾಪ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next