Advertisement

ಈ ಬಾರಿ 9% ಮಳೆ ಕೊರತೆ

08:35 AM Oct 01, 2018 | Team Udayavani |

ಹೊಸದಿಲ್ಲಿ: ಪ್ರಸಕ್ತ ಮುಂಗಾರು ಋತು ರವಿವಾರ ಅಂತ್ಯಗೊಂಡಿದ್ದು, ಈ ವರ್ಷ ದೇಶದಲ್ಲಿ ಶೇ.9ರಷ್ಟು ಮಳೆ ಕೊರತೆ ಉಂಟಾಗಿದೆಯಲ್ಲದೆ, ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಿಹಾರ, ಜಾರ್ಖಂಡ್‌, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದ ಮಳೆ ಅಭಾವ ಕಂಡುಬಂದಿದೆ. ಸತತ 2ನೇ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದೂ ಇಲಾಖೆ ಹೇಳಿದೆ. ಪ್ರಸಕ್ತ ವರ್ಷ ಸಾಮಾನ್ಯ ಮಳೆಯಾಗಲಿದೆ ಎಂದು ಇಲಾಖೆ ಈ ಹಿಂದೆ ಅಂದಾಜಿಸಿತ್ತು. ಆದರೆ, ಶೇ.9ರಷ್ಟು ಮಳೆ ಕೊರತೆಯಾಗಿದೆ. ಒಟ್ಟಾರೆಯಾಗಿ ದೇಶವು ಶೇ.91ರಷ್ಟು ಮಳೆಗೆ ಸಾಕ್ಷಿಯಾಗಿದೆ. ಕೇರಳ ಸೇರಿದಂತೆ ದಕ್ಷಿಣದ ಕೆಲವು ರಾಜ್ಯಗಳಲ್ಲಿ ಉತ್ತಮ ಮಳೆಯಾಗಿದ್ದು, ಉತ್ತರ ಭಾರತದಲ್ಲಿ ಮಳೆ ಕೊರತೆಯಾಗಿದೆ ಎಂದೂ ಇಲಾಖೆ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next