Advertisement

ಮಾಸಿಕ ಪಿಂಚಣಿಗಾಗಿ 22ಕ್ಕೆ ಕಾರ್ಯಕರ್ತೆಯರ ಧರಣಿ 

06:05 AM Sep 21, 2018 | Team Udayavani |

ಬೆಂಗಳೂರು: ನಿವೃತ್ತಿಯಾಗಿರುವ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರಿಗೆ ಮಾಸಿಕ ಪಿಂಚಣಿ ಕನಿಷ್ಠ 3 ಸಾವಿರ ರೂ.ಗಳನ್ನು ನೀಡುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಒಕ್ಕೂಟ ಸೆ.22ರಂದು ಪ್ರತಿಭಟನೆ ಹಮ್ಮಿಕೊಂಡಿದೆ.

Advertisement

ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ಮಾತನಾಡಿ, ಅಂದು ಬೆಳಗ್ಗೆ 11ಕ್ಕೆ ನಗರದ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೂ ಬೃಹತ್‌ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ರ್ಯಾಲಿಯಲ್ಲಿ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸರ್ಕಾರಿ ಕೆಲಸ ಮಾಡಿ ನಿವೃತ್ತಿ ಹೊಂದಿದ ಅನೇಕ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ದೊರೆತಿಲ್ಲ. ಪಿಂಚಣಿಯೂ ಇಲ್ಲ. 7ನೇ ವೇತನ ಆಯೋಗ ಕನಿಷ್ಠ 18 ಸಾವಿರ ರೂ.ಗಳ ಮಾಸಿಕ ವೇತನ ಜಾರಿಗೊಳಿಸುವಂತೆ ಘೋಷಿಸಿದ್ದರೂ ಕೇಂದ್ರ ಸರ್ಕಾರ ಜಾರಿಗೊಳಿಸದಿರುವುದು ಖಂಡನೀಯ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next