Advertisement

ಮೂಡುಬಿದಿರೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

03:19 PM May 14, 2022 | Team Udayavani |

ಮೂಡುಬಿದಿರೆ: ವ್ಯಕ್ತಿಯೊರ್ವ ತನ್ನ ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯ ಅರಮನೆ ಬಾಗಿಲು ಬಳಿಯಲ್ಲಿ ಶನಿವಾರ ನಡೆದಿದೆ.

Advertisement

ತೋಟದ ಮನೆಯ ನಿವಾಸಿ ರಾಮಚಂದ್ರ ಅವರ ಪುತ್ರ ಶಿವಪ್ರಸಾದ್ (34ವ) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕುಡಿತದ ಚಟವನ್ನು ಹೊಂದಿದ್ದ ಶಿವ ಪ್ರಸಾದ್, ಪತ್ನಿ ತವರು ಮನೆಗೆ ಹೋಗಿದ್ದ ವೇಳೆ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಮಾಟ ಮಂತ್ರದ ಶಂಕೆ : ಮಾವನ ಶಿರಚ್ಛೇದ ; ರುಂಡ, ಕೊಡಲಿಯೊಂದಿಗೆ ಬೀದಿಗೆ ಬಂದ

ಮೂಡುಬಿದಿರೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next