Advertisement

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

12:41 AM Oct 02, 2024 | Team Udayavani |

ಮೂಡುಬಿದಿರೆ: ಕಲ್ಲಮುಂಡ್ಕೂರು ಪರಿಸರದಲ್ಲಿ ಕೆಲವು ದಿನಗಳಿಂದ ತಿರುಗಾಡುತ್ತ ಸಾರ್ವಜನಿಕರಿಗೆ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.

Advertisement

ಪಂಚಾಯತ್‌ ಸದಸ್ಯ ವಸಂತ್‌ ಸಹಿತ ಗ್ರಾಮಸ್ಥರು ಮೂಡುಬಿದಿರೆ ಅರಣ್ಯಾಧಿಕಾರಿಗಳಿಗೆ ಚಿರತೆ ತಿರುಗಾಡುತ್ತಿದ್ದ ವಿಷಯವನ್ನು ತಿಳಿಸಿದ್ದರು. ಎಸಿಎಫ್‌ ಪಿ. ಶ್ರೀಧರ್‌ ಹಾಗೂ ವಲಯ ಅರಣ್ಯಾಧಿಕಾರಿ ಕಿರಣ್‌ ಕುಮಾರ್‌ ಜಿ. ಅವರ ಮಾರ್ಗದರ್ಶನದಲ್ಲಿ ಕಳಸಬೈಲು ಎಂಬಲ್ಲಿ ಮೂರು ದಿನಗಳ ಹಿಂದೆ ಬೋನ್‌ ಅನ್ನು ಇಡಲಾಗಿತ್ತು. ಮಂಗಳವಾರ ಮುಂಜಾನೆ ವೇಳೆಗೆ ಚಿರತೆ ಬೋನಿಗೆ ಬಿದ್ದಿದೆ.

ಮೂಡುಬಿದಿರೆ ಉಪವಲಯ ಅರಣ್ಯಾಧಿಕಾರಿ ಮಂಜುನಾಥ ಗಾಣಿಗ, ಗಸ್ತು ಅರಣ್ಯ ಪಾಲಕ ರಾಜೇಶ್‌ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಸಹಿತ ಬೋನನ್ನು ಹಿಡಿದುಕೊಂಡು ಬಂದಿದ್ದಾರೆ. ಈ ಚಿರತೆಯನ್ನು ಸುರಕ್ಷಿತ ಆರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next