Advertisement

ಪಡಿತರ ವಿತರಣೆಯಲ್ಲಿ ಲೋಪವಾದರೆ ಕ್ರಮ

06:27 PM Jun 08, 2020 | Naveen |

ಮೂಡಿಗೆರೆ: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಲೋಪದೋಷಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ನಿರ್ದೇಶಕ ನಾಗರಾಜ್‌ ಎಚ್ಚರಿಕೆ ನೀಡಿದರು.

Advertisement

ಪಟ್ಟಣದ ರೈತ ಭವನದಲ್ಲಿ ನಡೆದ ಪಡಿತರ ವಿತರಕರ ತಾಲೂಕು ಮಟ್ಟದ ಸಭೆಯಲ್ಲಿ ಮಾತನಾಡಿದರು. ಬಡತನ ರೇಖೆಗಿಂತ ಕೆಳಗಿನವರು ಹಾಗೂ ಬಿಪಿಎಲ್‌ ಕಾರ್ಡುದಾರರು ಸರ್ಕಾರ ತಮಗೆ ನೀಡಿರುವ ಪಡಿತರವನ್ನು ಪಡೆದುಕೊಳ್ಳುವುದು ಅವರ ಹಕ್ಕಾಗಿರುತ್ತದೆ. ದೇಶದಲ್ಲಿ ಆಹಾರ ಭದ್ರತಾ ಕಾಯ್ದೆ ಜಾರಿಯಲ್ಲಿರುವುದರಿಂದ ಯಾರೊಬ್ಬರೂ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ನಿರ್ವಹಿಸಬೇಕೆಂದರು.

ತಾಲೂಕು ಆಹಾರ ಇಲಾಖೆಯ ಶಿರಸ್ತೇದಾರ್‌ ಇಂದ್ರೇಶ್‌, ಆಹಾರ ನಿರೀಕ್ಷಕ ಬಸವೇಗೌಡ ಪಡಿತರ ವಿತರಕರ ಸಂಘದ ಅಧ್ಯಕ್ಷ ಅಣ್ಣೇಗೌಡ ಸಭೆಯಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next