Advertisement

ಮೂಡಿಗೆರೆ: ದುಷ್ಕರ್ಮಿಗಳು ಇಟ್ಟ ಉರುಳಿಗೆ ಸಿಲುಕಿ ಚಿರತೆ ಸಾವು

08:22 PM Feb 07, 2023 | Team Udayavani |

ಮೂಡಿಗೆರೆ: ಮೂಡಿಗೆರೆ ತಾಲೂಕಿನ ಬಿಳಗುಳ ಕೊಲ್ಲಿಬ್ಯೆಲ್ ಸಮೀಪದ ಲಕ್ಷ್ಮಣಗೌಡ ಎಂಬುವವರ ಸುಮಾರು 10 ವರ್ಷದಿಂದ ಪಾಳುಬಿದ್ದ ಕಾಫಿ ತೋಟದಲ್ಲಿ. ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಸುಮಾರು ಮೂರು ವರ್ಷದ ಚಿರತೆ ಸಿಲುಕಿ ಸಾವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ವೇಳೆ ನಡೆದಿದೆ.

Advertisement

ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೆಲವೆ ಅಡಿ ದೂರದ ಅಂತರದಲ್ಲಿ ಚಿರತೆಯು ಉರುಳಿಗೆ ಬಿದ್ದಿದ್ದು ಈ ವೇಳೆ ಕೂಗಾಟವನ್ನು ಕೇಳಿ ದಾರಿಯಲ್ಲಿ ಹೋಗುವ ಪ್ರಯಾಣಿಕರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದು.

ರಾತ್ರಿಯೇ ತೆರಳಿದ ಅಧಿಕಾರಿಗಳು ಚಿರತೆಯನ್ನು ಬದುಕಿಸಲು ಪ್ರಯತ್ನಪಟ್ಟಿದ್ದು ಉರುಳು ಕುತ್ತಿಗೆ ಬಲವಾಗಿ ಸಿಲುಕಿದ್ದ ಕಾರಣ ಮೃತಪಡುವ ಹಂತಕ್ಕೆ ತಲುಪಿದ್ದು. ರಕ್ಷಣೆ ಮಾಡುವ ವೇಳೆಗೆ ಮೃತಪಟ್ಟಿದ್ದು. ಈ ಸಂಭಂಧ ತೋಟದ ಮಾಲೀಕರು ಮತ್ತು ಉರುಳು ಹಾಕಿದ ದುಷ್ಕರ್ಮಿಗಳ ವಿರುದ್ಧ ಮುಖದಮ್ಮೆ ದಾಖಲಿಸಿದ್ದು. ಮೂಡಿಗೆರೆ ಅರಣ್ಯ ಇಲಾಖೆಗೆ ಶವ ಸ್ಥಳಾಂತರಿಸಿ ಮರಣೋತ್ತರ ಪರೀಕ್ಷೆಯ ನಂತರ ಚಿರತೆಯ ಶವವನ್ನು ಅಗ್ನಿಸ್ಪರ್ಷ ಮೂಲಕ ಸಂಸ್ಕಾರ ನಡೆಸಲು ತಿರ್ಮಾನಿಸಲಾಗಿದೆ.

ಇದನ್ನೂ ಓದಿ: ವಿಶ್ವದ ಅತಿ ಬುದ್ಧಿವಂತೆ ಬಾಲಕಿ ಭಾರತ ಮೂಲದ ನತಾಶಾ

Advertisement

Udayavani is now on Telegram. Click here to join our channel and stay updated with the latest news.

Next