Advertisement

ಮೂಡುಬೆಳ್ಳೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ

03:45 AM Jul 04, 2017 | Team Udayavani |

ಕಾಪು: ವಿದ್ಯಾರ್ಥಿ ಜೀವನದ ಯಶಸ್ಸು ಅವರ ಶಿಸ್ತು ಬದ್ಧ ದಿನಚರಿ, ಉತ್ತಮ ಹವ್ಯಾಸ ಮತ್ತು ಸತತ ಪ್ರಯತ್ನದ ಫಲವಾಗಿದೆ. ಉತ್ತಮ ಅಂಕಗಳೊಂದಿಗೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಬೇಕು ಎಂದು ಸಂತ ಲಾರೆನ್ಸ್‌ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ| ಕ್ಲೆಮೆಂಟ್‌ ಮಸ್ಕರೇನ್ಹಸ್‌ ಹೇಳಿದರು.

Advertisement

ಮೂಡುಬೆಳ್ಳೆ ಸಂತ ಲಾರೆನ್ಸ್‌ ಪದವಿ ಪೂರ್ವ ಕಾಲೇಜಿನಲ್ಲಿ 2016-17 ನೇ ಸಾಲಿನ ಪಬ್ಲಿಕ್‌ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.

ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 25 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.  ಕಾಲೇಜಿಗೆ ಉತ್ತಮ ಫಲಿತಾಂಶ ತರಲು ಶ್ರಮಿಸಿದ ಶಿಕ್ಷಕ -ಶಿಕ್ಷಕೇತರನ್ನು ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಚರ್ಚ್‌ ಪಾಲನಾ ಮಂಡಳಿಯ ಉಪಾಧ್ಯಕ್ಷ ವಿನ್ಸೆಂಟ್‌  ಫೆರ್ನಾಂಡಿಸ್‌, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮ್ಯಾಕ್ಷಿಮ್‌ ಡೇಸಾ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಆಲೊ#àನ್ಸ್‌ ಕೆ. ಆಲ್ವ, ಆಡಳಿತ ಮಂಡಳಿಯ ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಪ್ರಾಂಶುಪಾಲ ನವೀನ್‌ ಕೊರೆಯರವರು ಸ್ವಾಗತಿಸಿದರು. ಪ್ರೌಢಶಾಲಾ ಹಿರಿಯ ಶಿಕ್ಷಕಿ ಲೀನಾ ಡಿ.ಸಿಲ್ವಾ ವಂದಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಆಲ್ವಿನಾ  ಡಿ.ಸೋಜ ಕಾರ್ಯಕ್ರಮ ನಿರೂಪಿಸಿದರು.
 

Advertisement
Advertisement

Udayavani is now on Telegram. Click here to join our channel and stay updated with the latest news.

Next